ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.
ಕಾರ್ಯಕ್ರಮವನ್ನು ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ ಗೋಪಾಲ ಬಂಗೇರ ಕೆ. ಅಗರಿ ಎಂಟರ್ಪ್ರೈಸಸ್ನ ಮಾಲಕರಾದ ಅಗರಿ ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…