ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.
ಕಾರ್ಯಕ್ರಮವನ್ನು ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ ಗೋಪಾಲ ಬಂಗೇರ ಕೆ. ಅಗರಿ ಎಂಟರ್ಪ್ರೈಸಸ್ನ ಮಾಲಕರಾದ ಅಗರಿ ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…