ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್ ತರಗತಿಯಲ್ಲಿ ಭಾಗವಹಿಸಿ ಬಳಿಕ ನಡೆದ ಆನ್-ಲೈನ್ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಧಾರವಾಡದಲ್ಲಿರುವ JJS ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಇವರು ಕಾಸರಗೂಡಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ರಾಜೇಶ್ ಹಾಗೂ ಚಿತ್ರಕಲಾ ದಂಪತಿಯ ಪುತ್ರಿ.
ಕಳೆದ ವರ್ಷ ನವಂಬರ್ 22ರಂದು ತುಳು ಲಿಪಿ ತರಗತಿಯನ್ನು ಆನ್ ಲೈನ್ ಮುಖಾಂತರ ಜೈ ತುಳುನಾಡು (ರಿ) ಸಂಘಟನೆ ಆಯೋಜಿಸಿತ್ತು. ಸುಮಾರು 3-4 ತಿಂಗಳುಗಳ ಕಾಲ ನಡೆದ ಈ ತರಗತಿಯಲ್ಲಿ ಮೂವರು ಶಿಕ್ಷಕರು ತುಳು ವರ್ಣಮಾಲೆ, ಕಾಗುಣಿತ ಮತ್ತು ಅಂಕೆಗಳ ಪಾಠವನ್ನು ಹೇಳಿಕೊಡುತ್ತಿದ್ದರು.
ಬಳಿಕ, ಶಬ್ದಗಳು, ವಾಕ್ಯ ರಚನೆ, ತುಳುವಿನಿಂದ ಕನ್ನಡಕ್ಕೆ ಬರೆಯುವುದು, ಕನ್ನಡದಿಂದ ತುಳು ಭಾಷೆಯ ಲಿಪಿಯಲ್ಲಿ ಬರೆಯುವುದನ್ನು ಶಿಕ್ಷಕರು ಹೇಳಿಕೊಡುತ್ತಿದ್ದರು.
ಈ ಪಾಠವೆಲ್ಲಾ ಮುಗಿದ ಬಳಿಕ, ಜುಲೈ. 23ರಂದು ಜೈ ತುಳುನಾಡು ಸಂಘಟನೆ ಮುಖಾತರ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳ ಫಲಿತಾಂಶ ಆಗಸ್ಟ್ 15ರಂದು ಪ್ರಕಟವಾಗಿದೆ. ಇದರಲ್ಲಿ ಪಂಚಮಿ ಬಿ ಆರ್ 100ಕ್ಕೆ 100 ಅಂಕಗಳನ್ನು ಪಡೆದುಕೊಂಡು ಮೊದಲ ಸ್ಥಾನ ಪಡೆದಿಕೊಂಡಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…