Advertisement
ಮಾಹಿತಿ

#AshadaAmavasye | ತುಳುವರ ಆಟಿ ಅಮವಾಸ್ಯೆ ಹಬ್ಬ | ಈ ಬಾರಿ ಬಂದಿದೆ ಎರಡು ಅಮವಾಸ್ಯೆ | ಕೊಂಚ ಗೊಂದಲದ ನಡುವೆ ಜುಲೈ17ಕ್ಕೆ ಆಚರಣೆ

Share

ಈ ವರ್ಷ ಆಟಿಯಲ್ಲಿ ಎರಡು ಅಮಾವಾಸ್ಯೆ ಬರಲಿದೆ. ಒಂದು ಜುಲೈ 17 ಮತ್ತೊಂದು ಆಗಸ್ಟ್ 16. ಮೊದಲನೆಯದ್ದು ಆಷಾಢಮಾಸದ ಅಮಾವಾಸ್ಯೆ. ಎರಡನೆಯದ್ದು ಅಧಿಕ ಶ್ರಾವಣಮಾಸದ ಅಮಾವಾಸ್ಯೆ. ಹಾಗಿರುವಾಗ ಯಾವ ಅಮಾವಾಸ್ಯೆಯನ್ನು ಆಟಿ ಅಮಾವಾಸ್ಯೆ ಎಂದು ಆಚರಿಸಬೇಕೆಂಬ ಗೊಂದಲ ಹಲವರಿಗೆ ಇದೆ.

Advertisement
Advertisement

ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆ ಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ.ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ  ಕ್ರಮ ಇದೆ .

Advertisement

ಆದರೆ ಅಟಿ ಅಮಾವಾಸ್ಯೆಯ ದಿನ ಮದ್ದು ಕುಡಿಯುವ ಸಂಪ್ರದಾಯವಿದೆ. ಅದೇ ಪ್ರಧಾನ ಆಚರಣೆಯೂ ಆಗಿದೆ.  ಅದು‌ ಹುಳಗಳನ್ನು ಕೊಲ್ಲುವುದಕ್ಕಾಗಿ ಇರುವ ಮದ್ದು ಇಂತಹ ಆರೋಗ್ಯದ ಉದ್ದೇಶಕ್ಕಾಗಿ  ಉಪಯೋಗವಾಗುವ ಮದ್ದನ್ನು ವರ್ಷಕ್ಕೊಂದೇ ದಿನ ಕುಡಿಯುವುದು ಸಂಪ್ರದಾಯ ಮತ್ತು ಆರೋಗ್ಯಕರವೂ ಹೌದು.  ಮೇಲಾಗಿ ಅದು ಹಾಲೆಯ (ಪಾಲೆ) ಮರದ ಕೆತ್ತೆಯಿಂದ ತೆಗೆಯುವ ಮದ್ದು  ಆ ಮರದ ಸಂಖ್ಯೆಯೂ‌ ಕಡಿಮೆ ಇರುವ ಕಾರಣ ಎರಡೆರಡು ಭಾರಿ ಅದರ ಕೆತ್ತೆ ತೆಗೆದರೆ ಮರಕ್ಕೂ ತೊಂದರೆಯಾಗಬಹುದು. ಮದ್ದು ತುಂಬ ಉಷ್ಣವಾದ ಕಾರಣವೂ ಎರಡೆರಡು ದಿನ ಕುಡಿಯುವುದು ಸಮಂಜಸವಲ್ಲ. ಈ ಎಲ್ಲ ದೃಷ್ಟಿಯಿಂದ ಇದರ ಆಚರಣೆಯ ದಿನ ಒಂದೇ ಆದರೆ ಸೂಕ್ತ. ಆದ್ದರಿಂದ ಯಾವ ದಿನ ಒಳ್ಳೆಯದು ಎಂದು ಯೋಚಿಸಬೇಕು.

ಯಾವ ಎರಡು ಆಮವಾಸ್ಯೆಗಳ ಮಧ್ಯೆ ಸೂರ್ಯ ಸಂಕ್ರಮಣ ಬರುವುದಿಲ್ಲವೋ ಆ ಚಂದ್ರಮಾಸವನ್ನು ಅಧಿಕ ಮಾಸವೆಂದು ಕರೆಯುತ್ತಾರೆ. ಚಾಂದ್ರ ಮಾಸದ ಯಾವ ಮಾಸದಲ್ಲಿ ಎರಡು ಸೂರ್ಯ ಸಂಕ್ರಮಣ ಬರುವುದೋ ಅಂದರೆ ಅಮಾವಾಸ್ಯೆ ಯಿಂದ ಅಮವಾಸ್ಯೆಯೊಳಗೆ 2 ಸೂರ್ಯ ಸಂಕ್ರಮಣಗಳು ಬರುವವೋ ಅದನ್ನು ಕ್ಷಯ ಮಾಸ ಎನ್ನುತ್ತಾರೆ.

Advertisement

ಅಧಿಕಮಾಸವನ್ನು ಮಲಮಾಸ ಎನ್ನುವುದಾಗಿ ಕರೆಯುವುದು ಒಂದು ಮತ. ಆದ್ದರಿಂದ ಅಧಿಕ ಶ್ರಾವಣದ ಎರಡನೆಯ ಅಮಾವಾಸ್ಯೆ ಮೊದಲ ಅಮಾವಾಸ್ಯೆಯಷ್ಟು ಸೂಕ್ತವಲ್ಲದ ದಿನ ಅಲ್ಲ. ಈ ಎಲ್ಲ ಕಾರಣದಿಂದ ವಿದ್ವಾಂಸರು ಅಭಿಪ್ರಾಯಪಟ್ಟಂತೆ ಮೊದಲ  ಆಟಿ ಅಮಾವಾಸ್ಯೆ ಅಂದರೆ ಜುಲೈ 17 ರಂದೇ ಆಟಿ ಅಮಾವಾಸ್ಯೆ ಆಚರಿಸುವುದು ಸೂಕ್ತ. ಪಲಿಮಾರು ಮಠದ ಪಂಚಾಂಗದಲ್ಲಿಯೂ ಈ ದಿನವನ್ನೇ ಆಟಿ ಅಮಾವಾಸ್ಯೆ ಎಂದು ಬರೆದಿದ್ದಾರೆ

ಆದ್ದರಿಂದ ಒಂದನೇ ಅಮಾವಾಸ್ಯೆ ಅಂದರೆ ಜುಲೈ 17 ರಂದೇ ಆಟಿ ಅಮಾವಾಸ್ಯೆ ಯಾಗಿ ಆಚರಿಸುವುದು ಸರಿಯಾದ ಕ್ರಮ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

2 hours ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

10 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

11 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

11 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

11 hours ago