Advertisement
ಮಾಹಿತಿ

#AshadaAmavasye | ತುಳುವರ ಆಟಿ ಅಮವಾಸ್ಯೆ ಹಬ್ಬ | ಈ ಬಾರಿ ಬಂದಿದೆ ಎರಡು ಅಮವಾಸ್ಯೆ | ಕೊಂಚ ಗೊಂದಲದ ನಡುವೆ ಜುಲೈ17ಕ್ಕೆ ಆಚರಣೆ

Share

ಈ ವರ್ಷ ಆಟಿಯಲ್ಲಿ ಎರಡು ಅಮಾವಾಸ್ಯೆ ಬರಲಿದೆ. ಒಂದು ಜುಲೈ 17 ಮತ್ತೊಂದು ಆಗಸ್ಟ್ 16. ಮೊದಲನೆಯದ್ದು ಆಷಾಢಮಾಸದ ಅಮಾವಾಸ್ಯೆ. ಎರಡನೆಯದ್ದು ಅಧಿಕ ಶ್ರಾವಣಮಾಸದ ಅಮಾವಾಸ್ಯೆ. ಹಾಗಿರುವಾಗ ಯಾವ ಅಮಾವಾಸ್ಯೆಯನ್ನು ಆಟಿ ಅಮಾವಾಸ್ಯೆ ಎಂದು ಆಚರಿಸಬೇಕೆಂಬ ಗೊಂದಲ ಹಲವರಿಗೆ ಇದೆ.

ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆ ಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ.ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ  ಕ್ರಮ ಇದೆ .

ಆದರೆ ಅಟಿ ಅಮಾವಾಸ್ಯೆಯ ದಿನ ಮದ್ದು ಕುಡಿಯುವ ಸಂಪ್ರದಾಯವಿದೆ. ಅದೇ ಪ್ರಧಾನ ಆಚರಣೆಯೂ ಆಗಿದೆ.  ಅದು‌ ಹುಳಗಳನ್ನು ಕೊಲ್ಲುವುದಕ್ಕಾಗಿ ಇರುವ ಮದ್ದು ಇಂತಹ ಆರೋಗ್ಯದ ಉದ್ದೇಶಕ್ಕಾಗಿ  ಉಪಯೋಗವಾಗುವ ಮದ್ದನ್ನು ವರ್ಷಕ್ಕೊಂದೇ ದಿನ ಕುಡಿಯುವುದು ಸಂಪ್ರದಾಯ ಮತ್ತು ಆರೋಗ್ಯಕರವೂ ಹೌದು.  ಮೇಲಾಗಿ ಅದು ಹಾಲೆಯ (ಪಾಲೆ) ಮರದ ಕೆತ್ತೆಯಿಂದ ತೆಗೆಯುವ ಮದ್ದು  ಆ ಮರದ ಸಂಖ್ಯೆಯೂ‌ ಕಡಿಮೆ ಇರುವ ಕಾರಣ ಎರಡೆರಡು ಭಾರಿ ಅದರ ಕೆತ್ತೆ ತೆಗೆದರೆ ಮರಕ್ಕೂ ತೊಂದರೆಯಾಗಬಹುದು. ಮದ್ದು ತುಂಬ ಉಷ್ಣವಾದ ಕಾರಣವೂ ಎರಡೆರಡು ದಿನ ಕುಡಿಯುವುದು ಸಮಂಜಸವಲ್ಲ. ಈ ಎಲ್ಲ ದೃಷ್ಟಿಯಿಂದ ಇದರ ಆಚರಣೆಯ ದಿನ ಒಂದೇ ಆದರೆ ಸೂಕ್ತ. ಆದ್ದರಿಂದ ಯಾವ ದಿನ ಒಳ್ಳೆಯದು ಎಂದು ಯೋಚಿಸಬೇಕು.

ಯಾವ ಎರಡು ಆಮವಾಸ್ಯೆಗಳ ಮಧ್ಯೆ ಸೂರ್ಯ ಸಂಕ್ರಮಣ ಬರುವುದಿಲ್ಲವೋ ಆ ಚಂದ್ರಮಾಸವನ್ನು ಅಧಿಕ ಮಾಸವೆಂದು ಕರೆಯುತ್ತಾರೆ. ಚಾಂದ್ರ ಮಾಸದ ಯಾವ ಮಾಸದಲ್ಲಿ ಎರಡು ಸೂರ್ಯ ಸಂಕ್ರಮಣ ಬರುವುದೋ ಅಂದರೆ ಅಮಾವಾಸ್ಯೆ ಯಿಂದ ಅಮವಾಸ್ಯೆಯೊಳಗೆ 2 ಸೂರ್ಯ ಸಂಕ್ರಮಣಗಳು ಬರುವವೋ ಅದನ್ನು ಕ್ಷಯ ಮಾಸ ಎನ್ನುತ್ತಾರೆ.

ಅಧಿಕಮಾಸವನ್ನು ಮಲಮಾಸ ಎನ್ನುವುದಾಗಿ ಕರೆಯುವುದು ಒಂದು ಮತ. ಆದ್ದರಿಂದ ಅಧಿಕ ಶ್ರಾವಣದ ಎರಡನೆಯ ಅಮಾವಾಸ್ಯೆ ಮೊದಲ ಅಮಾವಾಸ್ಯೆಯಷ್ಟು ಸೂಕ್ತವಲ್ಲದ ದಿನ ಅಲ್ಲ. ಈ ಎಲ್ಲ ಕಾರಣದಿಂದ ವಿದ್ವಾಂಸರು ಅಭಿಪ್ರಾಯಪಟ್ಟಂತೆ ಮೊದಲ  ಆಟಿ ಅಮಾವಾಸ್ಯೆ ಅಂದರೆ ಜುಲೈ 17 ರಂದೇ ಆಟಿ ಅಮಾವಾಸ್ಯೆ ಆಚರಿಸುವುದು ಸೂಕ್ತ. ಪಲಿಮಾರು ಮಠದ ಪಂಚಾಂಗದಲ್ಲಿಯೂ ಈ ದಿನವನ್ನೇ ಆಟಿ ಅಮಾವಾಸ್ಯೆ ಎಂದು ಬರೆದಿದ್ದಾರೆ

ಆದ್ದರಿಂದ ಒಂದನೇ ಅಮಾವಾಸ್ಯೆ ಅಂದರೆ ಜುಲೈ 17 ರಂದೇ ಆಟಿ ಅಮಾವಾಸ್ಯೆ ಯಾಗಿ ಆಚರಿಸುವುದು ಸರಿಯಾದ ಕ್ರಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago