Advertisement
ಮಾಹಿತಿ

#AshadaAmavasye | ತುಳುವರ ಆಟಿ ಅಮವಾಸ್ಯೆ ಹಬ್ಬ | ಈ ಬಾರಿ ಬಂದಿದೆ ಎರಡು ಅಮವಾಸ್ಯೆ | ಕೊಂಚ ಗೊಂದಲದ ನಡುವೆ ಜುಲೈ17ಕ್ಕೆ ಆಚರಣೆ

Share

ಈ ವರ್ಷ ಆಟಿಯಲ್ಲಿ ಎರಡು ಅಮಾವಾಸ್ಯೆ ಬರಲಿದೆ. ಒಂದು ಜುಲೈ 17 ಮತ್ತೊಂದು ಆಗಸ್ಟ್ 16. ಮೊದಲನೆಯದ್ದು ಆಷಾಢಮಾಸದ ಅಮಾವಾಸ್ಯೆ. ಎರಡನೆಯದ್ದು ಅಧಿಕ ಶ್ರಾವಣಮಾಸದ ಅಮಾವಾಸ್ಯೆ. ಹಾಗಿರುವಾಗ ಯಾವ ಅಮಾವಾಸ್ಯೆಯನ್ನು ಆಟಿ ಅಮಾವಾಸ್ಯೆ ಎಂದು ಆಚರಿಸಬೇಕೆಂಬ ಗೊಂದಲ ಹಲವರಿಗೆ ಇದೆ.

ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆ ಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ.ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ  ಕ್ರಮ ಇದೆ .

ಆದರೆ ಅಟಿ ಅಮಾವಾಸ್ಯೆಯ ದಿನ ಮದ್ದು ಕುಡಿಯುವ ಸಂಪ್ರದಾಯವಿದೆ. ಅದೇ ಪ್ರಧಾನ ಆಚರಣೆಯೂ ಆಗಿದೆ.  ಅದು‌ ಹುಳಗಳನ್ನು ಕೊಲ್ಲುವುದಕ್ಕಾಗಿ ಇರುವ ಮದ್ದು ಇಂತಹ ಆರೋಗ್ಯದ ಉದ್ದೇಶಕ್ಕಾಗಿ  ಉಪಯೋಗವಾಗುವ ಮದ್ದನ್ನು ವರ್ಷಕ್ಕೊಂದೇ ದಿನ ಕುಡಿಯುವುದು ಸಂಪ್ರದಾಯ ಮತ್ತು ಆರೋಗ್ಯಕರವೂ ಹೌದು.  ಮೇಲಾಗಿ ಅದು ಹಾಲೆಯ (ಪಾಲೆ) ಮರದ ಕೆತ್ತೆಯಿಂದ ತೆಗೆಯುವ ಮದ್ದು  ಆ ಮರದ ಸಂಖ್ಯೆಯೂ‌ ಕಡಿಮೆ ಇರುವ ಕಾರಣ ಎರಡೆರಡು ಭಾರಿ ಅದರ ಕೆತ್ತೆ ತೆಗೆದರೆ ಮರಕ್ಕೂ ತೊಂದರೆಯಾಗಬಹುದು. ಮದ್ದು ತುಂಬ ಉಷ್ಣವಾದ ಕಾರಣವೂ ಎರಡೆರಡು ದಿನ ಕುಡಿಯುವುದು ಸಮಂಜಸವಲ್ಲ. ಈ ಎಲ್ಲ ದೃಷ್ಟಿಯಿಂದ ಇದರ ಆಚರಣೆಯ ದಿನ ಒಂದೇ ಆದರೆ ಸೂಕ್ತ. ಆದ್ದರಿಂದ ಯಾವ ದಿನ ಒಳ್ಳೆಯದು ಎಂದು ಯೋಚಿಸಬೇಕು.

ಯಾವ ಎರಡು ಆಮವಾಸ್ಯೆಗಳ ಮಧ್ಯೆ ಸೂರ್ಯ ಸಂಕ್ರಮಣ ಬರುವುದಿಲ್ಲವೋ ಆ ಚಂದ್ರಮಾಸವನ್ನು ಅಧಿಕ ಮಾಸವೆಂದು ಕರೆಯುತ್ತಾರೆ. ಚಾಂದ್ರ ಮಾಸದ ಯಾವ ಮಾಸದಲ್ಲಿ ಎರಡು ಸೂರ್ಯ ಸಂಕ್ರಮಣ ಬರುವುದೋ ಅಂದರೆ ಅಮಾವಾಸ್ಯೆ ಯಿಂದ ಅಮವಾಸ್ಯೆಯೊಳಗೆ 2 ಸೂರ್ಯ ಸಂಕ್ರಮಣಗಳು ಬರುವವೋ ಅದನ್ನು ಕ್ಷಯ ಮಾಸ ಎನ್ನುತ್ತಾರೆ.

ಅಧಿಕಮಾಸವನ್ನು ಮಲಮಾಸ ಎನ್ನುವುದಾಗಿ ಕರೆಯುವುದು ಒಂದು ಮತ. ಆದ್ದರಿಂದ ಅಧಿಕ ಶ್ರಾವಣದ ಎರಡನೆಯ ಅಮಾವಾಸ್ಯೆ ಮೊದಲ ಅಮಾವಾಸ್ಯೆಯಷ್ಟು ಸೂಕ್ತವಲ್ಲದ ದಿನ ಅಲ್ಲ. ಈ ಎಲ್ಲ ಕಾರಣದಿಂದ ವಿದ್ವಾಂಸರು ಅಭಿಪ್ರಾಯಪಟ್ಟಂತೆ ಮೊದಲ  ಆಟಿ ಅಮಾವಾಸ್ಯೆ ಅಂದರೆ ಜುಲೈ 17 ರಂದೇ ಆಟಿ ಅಮಾವಾಸ್ಯೆ ಆಚರಿಸುವುದು ಸೂಕ್ತ. ಪಲಿಮಾರು ಮಠದ ಪಂಚಾಂಗದಲ್ಲಿಯೂ ಈ ದಿನವನ್ನೇ ಆಟಿ ಅಮಾವಾಸ್ಯೆ ಎಂದು ಬರೆದಿದ್ದಾರೆ

ಆದ್ದರಿಂದ ಒಂದನೇ ಅಮಾವಾಸ್ಯೆ ಅಂದರೆ ಜುಲೈ 17 ರಂದೇ ಆಟಿ ಅಮಾವಾಸ್ಯೆ ಯಾಗಿ ಆಚರಿಸುವುದು ಸರಿಯಾದ ಕ್ರಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

11 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

11 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago