Advertisement
MIRROR FOCUS

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

Share

ಒಂದು ಕಾಲದಲ್ಲಿ ತೆಂಗಿನ ತೋಟಗಳಿಗೆ ಹೆಸರುವಾಸಿಯಾಗಿದ್ದ ತುಮಕೂರು ಜಿಲ್ಲೆಯಲ್ಲಿ ಈಗ ಅಡಿಕೆ ಕೃಷಿ ವೇಗವಾಗಿ ವಿಸ್ತರಿಸುತ್ತಿದೆ. ಕೊಬ್ಬರಿ ಬೆಲೆಯಲ್ಲಿನ ಅನಿಶ್ಚಿತತೆ ಹಾಗೂ ಉತ್ತಮ ಆದಾಯದ ನಿರೀಕ್ಷೆಯಿಂದ ರೈತರು ಅಡಿಕೆ ಬೆಳೆ ಕಡೆಗೆ ತಿರುಗುತ್ತಿರುವುದು ಜಿಲ್ಲೆಯ ಕೃಷಿ ಚಿತ್ರಣವನ್ನೇ ಬದಲಾಯಿಸುತ್ತಿದೆ. ಇದರೊಂದಿಗೆ ಅಡಿಕೆ ಸಸಿಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಖಾಸಗಿ ನರ್ಸರಿಗಳಲ್ಲಿ ಒಂದು ಸಸಿಯ ಬೆಲೆ ₹150 ರಿಂದ ₹250 ರವರೆಗೆ ತಲುಪಿದೆ.

ತೋಟಗಾರಿಕೆ ಇಲಾಖೆಯ ಮಾಹಿತಿಯಂತೆ, ಕಳೆದ ನಾಲ್ಕು ವರ್ಷಗಳಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸೇರಿ ಸುಮಾರು 5.41 ಲಕ್ಷ ಅಡಿಕೆ ಸಸಿಗಳನ್ನು ರೈತರಿಗೆ ವಿತರಿಸಿವೆ. 2022-23ನೇ ಸಾಲಿನಲ್ಲಿ ಮಾತ್ರ 1.85 ಲಕ್ಷಕ್ಕೂ ಹೆಚ್ಚು ಸಸಿಗಳು ವಿತರಿಸಲ್ಪಟ್ಟಿವೆ.

ಪ್ರಸ್ತುತ ತುಮಕೂರು ಜಿಲ್ಲೆಯಲ್ಲಿ ಸುಮಾರು 94 ಸಾವಿರ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ವರ್ಷಕ್ಕೆ ಸರಾಸರಿ 1.05 ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆ ಆಗುತ್ತಿದ್ದು, ಜಿಲ್ಲೆಯ ಕೃಷಿ ಆರ್ಥಿಕತೆಯಲ್ಲಿ ಅಡಿಕೆ ಪ್ರಮುಖ ಸ್ಥಾನ ಪಡೆದುಕೊಳ್ಳುತ್ತಿದೆ.

ಸರ್ಕಾರಿ ನರ್ಸರಿಗಳಲ್ಲಿ ಅಡಿಕೆ ಸಸಿಗಳನ್ನು ₹25ಕ್ಕೆ ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ ₹60ಕ್ಕೆ ನೀಡಲಾಗುತ್ತಿದ್ದರೂ, ಲಭ್ಯತೆ ಕಡಿಮೆ ಇರುವುದರಿಂದ ಹೆಚ್ಚಿನ ರೈತರು ಖಾಸಗಿ ನರ್ಸರಿಗಳತ್ತ ಮುಖ ಮಾಡುತ್ತಿದ್ದಾರೆ. ಅಲ್ಲಿ ಕಳೆದ ವರ್ಷ ₹80-100 ಇದ್ದ ಸಸಿಗಳ ಬೆಲೆ ಈಗ ₹150-250ಕ್ಕೆ ಏರಿದೆ.

ಹೇಮಾವತಿ ಯೋಜನೆಯ ನೀರಾವರಿ ವ್ಯಾಪ್ತಿಯ ಪ್ರದೇಶಗಳಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಗುಬ್ಬಿ ತಾಲ್ಲೂಕು ಅತಿ ಹೆಚ್ಚು ಅಡಿಕೆ ಪ್ರದೇಶ ಹೊಂದಿರುವ ತಾಲ್ಲೂಕಾಗಿ ಹೊರಹೊಮ್ಮಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಅಡಿಕೆ ಲಾಭದಾಯಕ ಬೆಳೆ ಎಂಬ ಕಾರಣಕ್ಕೆ ರೈತರು ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಕಡೆಗೆ ತಿರುಗುತ್ತಿರುವುದು ನಿಜ. ಆದರೆ ಅಡಿಕೆ ಹೆಚ್ಚು ನೀರು ಬೇಕಾಗುವ ಬೆಳೆಯಾಗಿದ್ದು, ಇದರೊಂದಿಗೆ ಕೊಳವೆಬಾವಿಗಳ ಸಂಖ್ಯೆ ಹೆಚ್ಚುತ್ತಿರುವುದು ಭೂಗರ್ಭ ಜಲದ ಮೇಲೆ ಒತ್ತಡ ಹೆಚ್ಚಿಸುವ ಸಾಧ್ಯತೆಯೂ ಇದೆ ಎಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.

Farmers in Tumakuru, traditionally known for coconut cultivation, are increasingly shifting to arecanut farming due to volatile copra prices and better income prospects. The surge in demand has pushed arecanut sapling prices up to ₹250 in private nurseries, while cultivation has expanded to over 94,000 hectares in the district.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

5 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

11 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

11 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

22 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

22 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago