Advertisement
MIRROR FOCUS

ತುಮಕೂರು ರೈತರ ಖಾತೆಗೆ ಬಂತು ಉಂಡೇ ಕೊಬ್ಬರಿ ಬಾಕಿ ಹಣ | 346.50 ಕೋಟಿ ರೂ. ಪಾವತಿ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ಮಾಹಿತಿ

Share

2024 ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೇ ಕೊಬ್ಬರಿಗೆ ಸಂಬಂಧಪಟ್ಟ 346.50 ಕೋಟಿ ರೂ. ಮೊತ್ತವನ್ನು ರೈತರ ಖಾತೆಗೆ ಪಾವತಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement

2024 ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆ ಅಡಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು 378 ಕೋಟಿ ರೂ.ಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಹಾಗಾಗಿ, ಆಗಸ್ಟ್ 5 ರವರೆಗೆ ಸುಮಾರು 346.50 ಕೋಟಿ ರೂ. ಮೊತ್ತವನ್ನು (ಪ್ರತಿಶತ 92 ರಷ್ಟು) ರೈತರ ಖಾತೆಗೆ ನೇರವಾಗಿ(ಡಿಬಿಟಿ ಮುಖೇನ) ಪಾವತಿಸಲಾಗಿದೆ ಎಂದು ಕೇಂದ್ರ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಮಾರು 24,600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆ. ಬಾಕಿ ಉಳಿದ ಸುಮಾರು 2,438 ರೈತರ ಖಾತೆಗೆ ಅಂದಾಜು 31.64 ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ (ಪ್ರತಿಶತ 8 ರಷ್ಟು ಮಾತ್ರ). ಈ ಮೊತ್ತವನ್ನು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಎಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಹೇಳಿದ್ದಾರೆ.

Advertisement

ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ 691 ಕೋಟಿ ರೂ. ಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಸಚಿವ ಸೋಮಣ್ಣ ತಿಳಿಸಿದ್ದಾರೆ. ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಸೋಮಣ್ಣ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago