Advertisement
MIRROR FOCUS

ತುಮಕೂರು ರೈತರ ಖಾತೆಗೆ ಬಂತು ಉಂಡೇ ಕೊಬ್ಬರಿ ಬಾಕಿ ಹಣ | 346.50 ಕೋಟಿ ರೂ. ಪಾವತಿ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ಮಾಹಿತಿ

Share

2024 ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೇ ಕೊಬ್ಬರಿಗೆ ಸಂಬಂಧಪಟ್ಟ 346.50 ಕೋಟಿ ರೂ. ಮೊತ್ತವನ್ನು ರೈತರ ಖಾತೆಗೆ ಪಾವತಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣಮಾಹಿತಿ ನೀಡಿದ್ದಾರೆ.

2024 ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆ ಅಡಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು 378 ಕೋಟಿ ರೂ.ಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಹಾಗಾಗಿ, ಆಗಸ್ಟ್ 5 ರವರೆಗೆ ಸುಮಾರು 346.50 ಕೋಟಿ ರೂ. ಮೊತ್ತವನ್ನು (ಪ್ರತಿಶತ 92 ರಷ್ಟು) ರೈತರ ಖಾತೆಗೆ ನೇರವಾಗಿ(ಡಿಬಿಟಿ ಮುಖೇನ) ಪಾವತಿಸಲಾಗಿದೆ ಎಂದು ಕೇಂದ್ರ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಮಾರು 24,600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆ. ಬಾಕಿ ಉಳಿದ ಸುಮಾರು 2,438 ರೈತರ ಖಾತೆಗೆ ಅಂದಾಜು 31.64 ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ (ಪ್ರತಿಶತ 8 ರಷ್ಟು ಮಾತ್ರ). ಈ ಮೊತ್ತವನ್ನು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಎಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ 691 ಕೋಟಿ ರೂ. ಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಸಚಿವ ಸೋಮಣ್ಣ ತಿಳಿಸಿದ್ದಾರೆ. ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಸೋಮಣ್ಣ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

25 minutes ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

4 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

9 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

18 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

18 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

19 hours ago