ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…