ತುಮಕೂರು ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಅತಿ ಹೆಚ್ಚು ಮಳೆಯಿಂದ ಬೆಳೆ ಹಾನಿಯಾದ ಕ್ಷೇತ್ರಗಳಿಗೆ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಜಿಲ್ಲೆಯಲ್ಲಿ ಅಕ್ಟೋಬರ್ನಲ್ಲಿ 115.2 ಮಿ.ಮೀ. ವಾಡಿಕೆ ಮಳೆಯಿದ್ದು, ಇಲ್ಲಿಯವರೆಗೆ 271.30 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 108.7 ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ರಾಗಿ, ನೆಲಗಡಲೆ, ಮುಸುಕಿನ ಜೋಳ, ಹತ್ತಿ ಮತ್ತು ಇತರೆ ಕೃಷಿ ಬೆಳೆಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 93.6 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ. ಬೆಳೆ ಹಾನಿಯಾದ ರೈತ ಫಲಾನುಭವಿಗಳ ವಿವರಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿ, ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕಾ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…