ಹವಾಮಾನ ಮುನ್ಸೂಚನೆಯಂತೆ(IMD) ಮತ್ತೆ ಉತ್ತಮ ಮಳೆಯಾಗಲಿದೆ. ತುಂಗಭದ್ರಾ ಜಲಾಶಯದಿಂದ(Tunga Bhadra Dam) ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(C M Siddaramayya) ತಿಳಿಸಿದರು. ಅವರು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ. ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ.. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದರು.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ನ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನ: ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…