2,000 ರೂ ನೋಟು ವಿನಿಮಯಕ್ಕೆ ಇನ್ನೆರಡು ತಿಂಗಳು ಬಾಕಿ | ಸೆಪ್ಟೆಂಬರ್ 30 ಕೊನೆಯ ದಿನ |

August 8, 2023
1:28 PM
ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಅದಾದ ಬಳಿಕ ನೋಟು ಅಸಿಂಧುಗೊಳ್ಳುವುದಿಲ್ಲ ಎಂದು ಆರ್​ಬಿಐ ಹೇಳಿದೆಯಾದರೂ, ಆ ನೋಟು ನಿರುಪಯುಕ್ತವಾಗುತ್ತದಾ ಎಂಬುದು ಸ್ಪಷ್ಟಗೊಂಡಿಲ್ಲ.

ಅಂದು 500 ರೂ ಹಾಗೂ 1000ರೂ ನೋಟುಗಳ ಚಲಾವಣೆ ಹಿಂಪಡೆದಾಗ ಇಡೀ ದೇಶವೇ ಅಲ್ಲೋಲ ಕಲ್ಲೋಲವಾಗಿತ್ತು. ಆದರೆ ಕಳೆದ ಎರಡು ತಿಂಗಳ ಹಿಂದೆ 2000 ಮುಖ ಬೆಲೆಯ ನೋಡು ರದ್ದು ಮಾಡಿದಾಗ ಜನಸಾಮಾನ್ಯರು ಅಂತ ದೊಡ್ಡ ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ. ನೋಟನ್ನು ಬ್ಯಾಂಕ್‌ ಗಳಿಗೆ ಹಿಂದಿರಿಗಿಸುವ ಕೆಲಸ ಅದರಪಾಡಿಗೆ ನಡೆದಿದೆ. ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ.

Advertisement
Advertisement

ಭಾರತೀಯ ರಿಸರ್ವ್ ಬ್ಯಾಂಕ್  ತನ್ನ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿತ್ತು. 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಲ್ಲಿ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ತಿಳಿಸಲಾಗಿದೆ. ಜುಲೈ ತಿಂಗಳ ಅಂತ್ಯದೊಳಗೆ ಶೇ. 88ರಷ್ಟು ಪ್ರಮಾಣದಲ್ಲಿ ನೋಟುಗಳು ಮರಳಿವೆ ಎಂದು ಆರ್​ಬಿಐ ಮಾಹಿತಿ ನೀಡಿದೆ. ಅಂದರೆ ಇನ್ನೂ ಶೇ. 10ಕ್ಕಿಂತ ಹೆಚ್ಚು ನೋಟುಗಳು ಬ್ಯಾಂಕುಗಳಿಗೆ ಮರಳಿಲ್ಲದಿರುವುದು ಈ ಅಂಕಿ ಅಂಶದಿಂದ ಕಂಡುಬರುತ್ತದೆ. ಬಹಳ ಮಂದಿ ಬಳಿ 2,000 ರೂ ನೋಟುಗಳ ಸಂಗ್ರಹ ಇನ್ನೂ ಇರಬಹುದು.

ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಅದಾದ ಬಳಿಕ ನೋಟು ಅಸಿಂಧುಗೊಳ್ಳುವುದಿಲ್ಲ ಎಂದು ಆರ್​ಬಿಐ ಹೇಳಿದೆಯಾದರೂ, ಆ ನೋಟು ನಿರುಪಯುಕ್ತವಾಗುತ್ತದಾ ಎಂಬುದು ಸ್ಪಷ್ಟಗೊಂಡಿಲ್ಲ. ಸೆಪ್ಟಂಬರ್ 30 ರ ಬಳಿಕ ಆರ್​ಬಿಐ ಈ ಬಗ್ಗೆ ಸ್ಪಷ್ಟನೆ ನೀಡಬಹುದು. ಅದೇನೇ ಇದ್ದರೂ 2,000 ರೂ ನೋಟು ವಿನಿಮಯಕ್ಕೆ ಇನ್ನೂ ಒಂದೂವರೆ ತಿಂಗಳಿಗೂ ಹೆಚ್ಚು ಕಾಲಾವಕಾಶ ಇದೆ. ಸೆಪ್ಟಂಬರ್ 30ರವರೆಗೆ ಬ್ಯಾಂಕುಗಳಿಗೆ ಯಾವ್ಯಾವಾಗ ರಜಾ ದಿನಗಳೆಂದು ತಿಳಿಯುವುದು ಈ ಸಂದರ್ಭದಲ್ಲಿ ಉಚಿತವೆನಿಸಬಹುದು.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |
May 23, 2025
10:22 PM
by: The Rural Mirror ಸುದ್ದಿಜಾಲ
ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ
May 23, 2025
10:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group