ಸುದ್ದಿಗಳು

2,000 ರೂ ನೋಟು ವಿನಿಮಯಕ್ಕೆ ಇನ್ನೆರಡು ತಿಂಗಳು ಬಾಕಿ | ಸೆಪ್ಟೆಂಬರ್ 30 ಕೊನೆಯ ದಿನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಂದು 500 ರೂ ಹಾಗೂ 1000ರೂ ನೋಟುಗಳ ಚಲಾವಣೆ ಹಿಂಪಡೆದಾಗ ಇಡೀ ದೇಶವೇ ಅಲ್ಲೋಲ ಕಲ್ಲೋಲವಾಗಿತ್ತು. ಆದರೆ ಕಳೆದ ಎರಡು ತಿಂಗಳ ಹಿಂದೆ 2000 ಮುಖ ಬೆಲೆಯ ನೋಡು ರದ್ದು ಮಾಡಿದಾಗ ಜನಸಾಮಾನ್ಯರು ಅಂತ ದೊಡ್ಡ ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ. ನೋಟನ್ನು ಬ್ಯಾಂಕ್‌ ಗಳಿಗೆ ಹಿಂದಿರಿಗಿಸುವ ಕೆಲಸ ಅದರಪಾಡಿಗೆ ನಡೆದಿದೆ. ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ.

Advertisement

ಭಾರತೀಯ ರಿಸರ್ವ್ ಬ್ಯಾಂಕ್  ತನ್ನ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿತ್ತು. 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಲ್ಲಿ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ತಿಳಿಸಲಾಗಿದೆ. ಜುಲೈ ತಿಂಗಳ ಅಂತ್ಯದೊಳಗೆ ಶೇ. 88ರಷ್ಟು ಪ್ರಮಾಣದಲ್ಲಿ ನೋಟುಗಳು ಮರಳಿವೆ ಎಂದು ಆರ್​ಬಿಐ ಮಾಹಿತಿ ನೀಡಿದೆ. ಅಂದರೆ ಇನ್ನೂ ಶೇ. 10ಕ್ಕಿಂತ ಹೆಚ್ಚು ನೋಟುಗಳು ಬ್ಯಾಂಕುಗಳಿಗೆ ಮರಳಿಲ್ಲದಿರುವುದು ಈ ಅಂಕಿ ಅಂಶದಿಂದ ಕಂಡುಬರುತ್ತದೆ. ಬಹಳ ಮಂದಿ ಬಳಿ 2,000 ರೂ ನೋಟುಗಳ ಸಂಗ್ರಹ ಇನ್ನೂ ಇರಬಹುದು.

ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಅದಾದ ಬಳಿಕ ನೋಟು ಅಸಿಂಧುಗೊಳ್ಳುವುದಿಲ್ಲ ಎಂದು ಆರ್​ಬಿಐ ಹೇಳಿದೆಯಾದರೂ, ಆ ನೋಟು ನಿರುಪಯುಕ್ತವಾಗುತ್ತದಾ ಎಂಬುದು ಸ್ಪಷ್ಟಗೊಂಡಿಲ್ಲ. ಸೆಪ್ಟಂಬರ್ 30 ರ ಬಳಿಕ ಆರ್​ಬಿಐ ಈ ಬಗ್ಗೆ ಸ್ಪಷ್ಟನೆ ನೀಡಬಹುದು. ಅದೇನೇ ಇದ್ದರೂ 2,000 ರೂ ನೋಟು ವಿನಿಮಯಕ್ಕೆ ಇನ್ನೂ ಒಂದೂವರೆ ತಿಂಗಳಿಗೂ ಹೆಚ್ಚು ಕಾಲಾವಕಾಶ ಇದೆ. ಸೆಪ್ಟಂಬರ್ 30ರವರೆಗೆ ಬ್ಯಾಂಕುಗಳಿಗೆ ಯಾವ್ಯಾವಾಗ ರಜಾ ದಿನಗಳೆಂದು ತಿಳಿಯುವುದು ಈ ಸಂದರ್ಭದಲ್ಲಿ ಉಚಿತವೆನಿಸಬಹುದು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

9 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

10 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

10 hours ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

10 hours ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

10 hours ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

10 hours ago