Advertisement
ಸುದ್ದಿಗಳು

2,000 ರೂ ನೋಟು ವಿನಿಮಯಕ್ಕೆ ಇನ್ನೆರಡು ತಿಂಗಳು ಬಾಕಿ | ಸೆಪ್ಟೆಂಬರ್ 30 ಕೊನೆಯ ದಿನ |

Share

ಅಂದು 500 ರೂ ಹಾಗೂ 1000ರೂ ನೋಟುಗಳ ಚಲಾವಣೆ ಹಿಂಪಡೆದಾಗ ಇಡೀ ದೇಶವೇ ಅಲ್ಲೋಲ ಕಲ್ಲೋಲವಾಗಿತ್ತು. ಆದರೆ ಕಳೆದ ಎರಡು ತಿಂಗಳ ಹಿಂದೆ 2000 ಮುಖ ಬೆಲೆಯ ನೋಡು ರದ್ದು ಮಾಡಿದಾಗ ಜನಸಾಮಾನ್ಯರು ಅಂತ ದೊಡ್ಡ ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ. ನೋಟನ್ನು ಬ್ಯಾಂಕ್‌ ಗಳಿಗೆ ಹಿಂದಿರಿಗಿಸುವ ಕೆಲಸ ಅದರಪಾಡಿಗೆ ನಡೆದಿದೆ. ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್  ತನ್ನ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿತ್ತು. 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಲ್ಲಿ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ತಿಳಿಸಲಾಗಿದೆ. ಜುಲೈ ತಿಂಗಳ ಅಂತ್ಯದೊಳಗೆ ಶೇ. 88ರಷ್ಟು ಪ್ರಮಾಣದಲ್ಲಿ ನೋಟುಗಳು ಮರಳಿವೆ ಎಂದು ಆರ್​ಬಿಐ ಮಾಹಿತಿ ನೀಡಿದೆ. ಅಂದರೆ ಇನ್ನೂ ಶೇ. 10ಕ್ಕಿಂತ ಹೆಚ್ಚು ನೋಟುಗಳು ಬ್ಯಾಂಕುಗಳಿಗೆ ಮರಳಿಲ್ಲದಿರುವುದು ಈ ಅಂಕಿ ಅಂಶದಿಂದ ಕಂಡುಬರುತ್ತದೆ. ಬಹಳ ಮಂದಿ ಬಳಿ 2,000 ರೂ ನೋಟುಗಳ ಸಂಗ್ರಹ ಇನ್ನೂ ಇರಬಹುದು.

ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಅದಾದ ಬಳಿಕ ನೋಟು ಅಸಿಂಧುಗೊಳ್ಳುವುದಿಲ್ಲ ಎಂದು ಆರ್​ಬಿಐ ಹೇಳಿದೆಯಾದರೂ, ಆ ನೋಟು ನಿರುಪಯುಕ್ತವಾಗುತ್ತದಾ ಎಂಬುದು ಸ್ಪಷ್ಟಗೊಂಡಿಲ್ಲ. ಸೆಪ್ಟಂಬರ್ 30 ರ ಬಳಿಕ ಆರ್​ಬಿಐ ಈ ಬಗ್ಗೆ ಸ್ಪಷ್ಟನೆ ನೀಡಬಹುದು. ಅದೇನೇ ಇದ್ದರೂ 2,000 ರೂ ನೋಟು ವಿನಿಮಯಕ್ಕೆ ಇನ್ನೂ ಒಂದೂವರೆ ತಿಂಗಳಿಗೂ ಹೆಚ್ಚು ಕಾಲಾವಕಾಶ ಇದೆ. ಸೆಪ್ಟಂಬರ್ 30ರವರೆಗೆ ಬ್ಯಾಂಕುಗಳಿಗೆ ಯಾವ್ಯಾವಾಗ ರಜಾ ದಿನಗಳೆಂದು ತಿಳಿಯುವುದು ಈ ಸಂದರ್ಭದಲ್ಲಿ ಉಚಿತವೆನಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

4 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

5 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

18 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

22 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago