Advertisement
ಸುದ್ದಿಗಳು

2,000 ರೂ ನೋಟು ವಿನಿಮಯಕ್ಕೆ ಇನ್ನೆರಡು ತಿಂಗಳು ಬಾಕಿ | ಸೆಪ್ಟೆಂಬರ್ 30 ಕೊನೆಯ ದಿನ |

Share

ಅಂದು 500 ರೂ ಹಾಗೂ 1000ರೂ ನೋಟುಗಳ ಚಲಾವಣೆ ಹಿಂಪಡೆದಾಗ ಇಡೀ ದೇಶವೇ ಅಲ್ಲೋಲ ಕಲ್ಲೋಲವಾಗಿತ್ತು. ಆದರೆ ಕಳೆದ ಎರಡು ತಿಂಗಳ ಹಿಂದೆ 2000 ಮುಖ ಬೆಲೆಯ ನೋಡು ರದ್ದು ಮಾಡಿದಾಗ ಜನಸಾಮಾನ್ಯರು ಅಂತ ದೊಡ್ಡ ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ. ನೋಟನ್ನು ಬ್ಯಾಂಕ್‌ ಗಳಿಗೆ ಹಿಂದಿರಿಗಿಸುವ ಕೆಲಸ ಅದರಪಾಡಿಗೆ ನಡೆದಿದೆ. ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್  ತನ್ನ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿತ್ತು. 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಲ್ಲಿ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ತಿಳಿಸಲಾಗಿದೆ. ಜುಲೈ ತಿಂಗಳ ಅಂತ್ಯದೊಳಗೆ ಶೇ. 88ರಷ್ಟು ಪ್ರಮಾಣದಲ್ಲಿ ನೋಟುಗಳು ಮರಳಿವೆ ಎಂದು ಆರ್​ಬಿಐ ಮಾಹಿತಿ ನೀಡಿದೆ. ಅಂದರೆ ಇನ್ನೂ ಶೇ. 10ಕ್ಕಿಂತ ಹೆಚ್ಚು ನೋಟುಗಳು ಬ್ಯಾಂಕುಗಳಿಗೆ ಮರಳಿಲ್ಲದಿರುವುದು ಈ ಅಂಕಿ ಅಂಶದಿಂದ ಕಂಡುಬರುತ್ತದೆ. ಬಹಳ ಮಂದಿ ಬಳಿ 2,000 ರೂ ನೋಟುಗಳ ಸಂಗ್ರಹ ಇನ್ನೂ ಇರಬಹುದು.

ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಅದಾದ ಬಳಿಕ ನೋಟು ಅಸಿಂಧುಗೊಳ್ಳುವುದಿಲ್ಲ ಎಂದು ಆರ್​ಬಿಐ ಹೇಳಿದೆಯಾದರೂ, ಆ ನೋಟು ನಿರುಪಯುಕ್ತವಾಗುತ್ತದಾ ಎಂಬುದು ಸ್ಪಷ್ಟಗೊಂಡಿಲ್ಲ. ಸೆಪ್ಟಂಬರ್ 30 ರ ಬಳಿಕ ಆರ್​ಬಿಐ ಈ ಬಗ್ಗೆ ಸ್ಪಷ್ಟನೆ ನೀಡಬಹುದು. ಅದೇನೇ ಇದ್ದರೂ 2,000 ರೂ ನೋಟು ವಿನಿಮಯಕ್ಕೆ ಇನ್ನೂ ಒಂದೂವರೆ ತಿಂಗಳಿಗೂ ಹೆಚ್ಚು ಕಾಲಾವಕಾಶ ಇದೆ. ಸೆಪ್ಟಂಬರ್ 30ರವರೆಗೆ ಬ್ಯಾಂಕುಗಳಿಗೆ ಯಾವ್ಯಾವಾಗ ರಜಾ ದಿನಗಳೆಂದು ತಿಳಿಯುವುದು ಈ ಸಂದರ್ಭದಲ್ಲಿ ಉಚಿತವೆನಿಸಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

6 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

6 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

24 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago