Advertisement
ಸುದ್ದಿಗಳು

2,000 ರೂ ನೋಟು ವಿನಿಮಯಕ್ಕೆ ಇನ್ನೆರಡು ತಿಂಗಳು ಬಾಕಿ | ಸೆಪ್ಟೆಂಬರ್ 30 ಕೊನೆಯ ದಿನ |

Share

ಅಂದು 500 ರೂ ಹಾಗೂ 1000ರೂ ನೋಟುಗಳ ಚಲಾವಣೆ ಹಿಂಪಡೆದಾಗ ಇಡೀ ದೇಶವೇ ಅಲ್ಲೋಲ ಕಲ್ಲೋಲವಾಗಿತ್ತು. ಆದರೆ ಕಳೆದ ಎರಡು ತಿಂಗಳ ಹಿಂದೆ 2000 ಮುಖ ಬೆಲೆಯ ನೋಡು ರದ್ದು ಮಾಡಿದಾಗ ಜನಸಾಮಾನ್ಯರು ಅಂತ ದೊಡ್ಡ ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ. ನೋಟನ್ನು ಬ್ಯಾಂಕ್‌ ಗಳಿಗೆ ಹಿಂದಿರಿಗಿಸುವ ಕೆಲಸ ಅದರಪಾಡಿಗೆ ನಡೆದಿದೆ. ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ.

Advertisement
Advertisement

ಭಾರತೀಯ ರಿಸರ್ವ್ ಬ್ಯಾಂಕ್  ತನ್ನ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿತ್ತು. 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಲ್ಲಿ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ತಿಳಿಸಲಾಗಿದೆ. ಜುಲೈ ತಿಂಗಳ ಅಂತ್ಯದೊಳಗೆ ಶೇ. 88ರಷ್ಟು ಪ್ರಮಾಣದಲ್ಲಿ ನೋಟುಗಳು ಮರಳಿವೆ ಎಂದು ಆರ್​ಬಿಐ ಮಾಹಿತಿ ನೀಡಿದೆ. ಅಂದರೆ ಇನ್ನೂ ಶೇ. 10ಕ್ಕಿಂತ ಹೆಚ್ಚು ನೋಟುಗಳು ಬ್ಯಾಂಕುಗಳಿಗೆ ಮರಳಿಲ್ಲದಿರುವುದು ಈ ಅಂಕಿ ಅಂಶದಿಂದ ಕಂಡುಬರುತ್ತದೆ. ಬಹಳ ಮಂದಿ ಬಳಿ 2,000 ರೂ ನೋಟುಗಳ ಸಂಗ್ರಹ ಇನ್ನೂ ಇರಬಹುದು.

Advertisement

ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಅದಾದ ಬಳಿಕ ನೋಟು ಅಸಿಂಧುಗೊಳ್ಳುವುದಿಲ್ಲ ಎಂದು ಆರ್​ಬಿಐ ಹೇಳಿದೆಯಾದರೂ, ಆ ನೋಟು ನಿರುಪಯುಕ್ತವಾಗುತ್ತದಾ ಎಂಬುದು ಸ್ಪಷ್ಟಗೊಂಡಿಲ್ಲ. ಸೆಪ್ಟಂಬರ್ 30 ರ ಬಳಿಕ ಆರ್​ಬಿಐ ಈ ಬಗ್ಗೆ ಸ್ಪಷ್ಟನೆ ನೀಡಬಹುದು. ಅದೇನೇ ಇದ್ದರೂ 2,000 ರೂ ನೋಟು ವಿನಿಮಯಕ್ಕೆ ಇನ್ನೂ ಒಂದೂವರೆ ತಿಂಗಳಿಗೂ ಹೆಚ್ಚು ಕಾಲಾವಕಾಶ ಇದೆ. ಸೆಪ್ಟಂಬರ್ 30ರವರೆಗೆ ಬ್ಯಾಂಕುಗಳಿಗೆ ಯಾವ್ಯಾವಾಗ ರಜಾ ದಿನಗಳೆಂದು ತಿಳಿಯುವುದು ಈ ಸಂದರ್ಭದಲ್ಲಿ ಉಚಿತವೆನಿಸಬಹುದು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

5 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

12 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

12 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

16 hours ago