ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕ ಯುವತಿಯರಿಗೆ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ಸಂಬಂಧ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಯೋಜನೆ ಅನುಷ್ಠಾನಕ್ಕಾಗಿ ಸರ್ಕಾರ 210 ಕೋಟಿ ವೆಚ್ಚ ಮಾಡುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು.
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…