ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕ ಯುವತಿಯರಿಗೆ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ಸಂಬಂಧ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಯೋಜನೆ ಅನುಷ್ಠಾನಕ್ಕಾಗಿ ಸರ್ಕಾರ 210 ಕೋಟಿ ವೆಚ್ಚ ಮಾಡುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…