Advertisement
ಸುದ್ದಿಗಳು

ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’

Share
ಬಂಟ್ವಾಳ ತಾಲೂಕಿನ ಉಬರು-ಮುಳಿಯ ‘ಹಲಸು ಸ್ನೇಹಿ ಕೂಟ’ವು 2011ರಿಂದ ಸಕ್ರಿಯ. ಹಲಸು, ಗೆಡ್ಡೆ, ತರಕಾರಿ, ಮಾವು, ಕಾಡುಮಾವು, ಪುನರ್ಪುಳಿ, ಚಳಿಗಾಲದ ತರಕಾರಿ, ಸಿರಿಧಾನ್ಯ, ಸೊಪ್ಪು ತರಕಾರಿಗಳು, ಹಣ್ಣುಗಳ ಫಲಾಹಾರ.. ಹೀಗೆ ಅನ್ಯಾನ್ಯ ಕಾರ್ಯಕ್ರಮಗಳನ್ನು ಒಂದು ಗ್ರಾಮ ಮಟ್ಟದ ವ್ಯಾಪ್ತಿಯಲ್ಲಿ ನಡೆಸಿದೆ.
ಹಲಸು ಮತ್ತು ಮಾವಿನ ‘ರುಚಿ ನೋಡಿ ತಳಿ ಆಯ್ಕೆ’ ಮೂಲಕ ಸುಮಾರು ಐವತ್ತಕ್ಕೂ ಮಿಕ್ಕಿ ತಳಿಗಳು ಅಭಿವೃದ್ಧಿಗೊಂಡು ಕೃಷಿಕರ ತೋಟದಲ್ಲಿ ಬೆಳೆದಿವೆ. ಹಲಸಿನ ತೋಟಗಳು ಎದ್ದಿವೆ. ಮೌಲ್ಯವರ್ಧಿತ ಉತ್ಪನ್ನಗಳು ಸಿದ್ಧಗೊಂಡಿವೆ. ಸುಮಾರು ಇಪ್ಪತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಉತ್ತಮ ಹಲಸು-ಮಾವುಗಳನ್ನು ‘ಕೃಷಿಕರೇ’ ಆಯ್ಕೆ ಮಾಡಿರುವುದು ವಿಶೇಷ.
ಸಂಪರ್ಕಕ್ಕೆ ಬಂದ ಅನೇಕ ಮನೆಗಳಲ್ಲಿ ಹಲಸು, ಮಾವು, ಸಿರಿಧಾನ್ಯ.. ಹೀಗೆ ಖಾದ್ಯಗಳಿಗೆ ಮೊದಲ ಮಣೆ. ಸದ್ದಿಲ್ಲದೆ ದಶಕಕ್ಕೂ ಮಿಕ್ಕಿ ಕಲಾಪಗಳನ್ನು ನಡೆಸುವುದ ಮೂಲಕ ಕೃಷಿ, ಕೃಷಿಕರ ಆಸಕ್ತಿಗಳನ್ನು ಜೀವಂತವಿಟ್ಟಿದೆ.
ಹನ್ನೊಂದು ವರುಷದ ‘ಹಲಸು ಸ್ನೇಹಿ ಕೂಟ’ದ ಕಲಾಪಗಳ ವಿವರಗಳು, ಆಯ್ಕೆಯಾದ ತಳಿಗಳು, ವಿಷಯ ತಜ್ಞರ ಮಾತುಗಳು ‘ಫಲಪ್ರದ’ ಪುಸ್ತಕದ ಹೂರಣಗಳು.
ಪುಸ್ತಕದ ಲೇಖಕ : ನಾ. ಕಾರಂತ ಪೆರಾಜೆ. ಹಲಸು ಸ್ನೇಹಿ ಕೂಟದ ಪ್ರಕಾಶನ.  ಪುತ್ತೂರಿನ ಜೈನ್ ಭವನದಲ್ಲಿ ಮೇ 24 ರಂದು ಅಡಿಕೆ ಪತ್ರಿಕೆಯ ಪ್ರಕಾಶಕ ಪಡಾರು ರಾಮಕೃಷ್ಣ ಶಾಸ್ತ್ರಿಯವರು ‘ಫಲಪ್ರದ’ವನ್ನು ಅನಾವರಣಗೊಳಿಸುವರು. ಪುತ್ತೂರಿನ ಶಾಸಕ ಅಶೋಕ ಕುಮಾರ್ ರೈ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಡಾ.ದಿನಕರ ಅಡಿಗ, ಬಲರಾಮ ಆಚಾರ್ಯ, ಮುಳಿಯ ವೆಂಕಟಕೃಷ್ಣ ಶರ್ಮ ಇವರೆಲ್ಲರ ಶುಭಸೇಸೆಯೊಂದಿಗೆ ‘ಫಲಪ್ರದ’ ಪುಸ್ತಕ ಅನಾವರಣಗೊಳ್ಳಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

8 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

15 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

15 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

15 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago