Advertisement
ಸುದ್ದಿಗಳು

ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’

Share
ಬಂಟ್ವಾಳ ತಾಲೂಕಿನ ಉಬರು-ಮುಳಿಯ ‘ಹಲಸು ಸ್ನೇಹಿ ಕೂಟ’ವು 2011ರಿಂದ ಸಕ್ರಿಯ. ಹಲಸು, ಗೆಡ್ಡೆ, ತರಕಾರಿ, ಮಾವು, ಕಾಡುಮಾವು, ಪುನರ್ಪುಳಿ, ಚಳಿಗಾಲದ ತರಕಾರಿ, ಸಿರಿಧಾನ್ಯ, ಸೊಪ್ಪು ತರಕಾರಿಗಳು, ಹಣ್ಣುಗಳ ಫಲಾಹಾರ.. ಹೀಗೆ ಅನ್ಯಾನ್ಯ ಕಾರ್ಯಕ್ರಮಗಳನ್ನು ಒಂದು ಗ್ರಾಮ ಮಟ್ಟದ ವ್ಯಾಪ್ತಿಯಲ್ಲಿ ನಡೆಸಿದೆ.
ಹಲಸು ಮತ್ತು ಮಾವಿನ ‘ರುಚಿ ನೋಡಿ ತಳಿ ಆಯ್ಕೆ’ ಮೂಲಕ ಸುಮಾರು ಐವತ್ತಕ್ಕೂ ಮಿಕ್ಕಿ ತಳಿಗಳು ಅಭಿವೃದ್ಧಿಗೊಂಡು ಕೃಷಿಕರ ತೋಟದಲ್ಲಿ ಬೆಳೆದಿವೆ. ಹಲಸಿನ ತೋಟಗಳು ಎದ್ದಿವೆ. ಮೌಲ್ಯವರ್ಧಿತ ಉತ್ಪನ್ನಗಳು ಸಿದ್ಧಗೊಂಡಿವೆ. ಸುಮಾರು ಇಪ್ಪತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಉತ್ತಮ ಹಲಸು-ಮಾವುಗಳನ್ನು ‘ಕೃಷಿಕರೇ’ ಆಯ್ಕೆ ಮಾಡಿರುವುದು ವಿಶೇಷ.
ಸಂಪರ್ಕಕ್ಕೆ ಬಂದ ಅನೇಕ ಮನೆಗಳಲ್ಲಿ ಹಲಸು, ಮಾವು, ಸಿರಿಧಾನ್ಯ.. ಹೀಗೆ ಖಾದ್ಯಗಳಿಗೆ ಮೊದಲ ಮಣೆ. ಸದ್ದಿಲ್ಲದೆ ದಶಕಕ್ಕೂ ಮಿಕ್ಕಿ ಕಲಾಪಗಳನ್ನು ನಡೆಸುವುದ ಮೂಲಕ ಕೃಷಿ, ಕೃಷಿಕರ ಆಸಕ್ತಿಗಳನ್ನು ಜೀವಂತವಿಟ್ಟಿದೆ.
ಹನ್ನೊಂದು ವರುಷದ ‘ಹಲಸು ಸ್ನೇಹಿ ಕೂಟ’ದ ಕಲಾಪಗಳ ವಿವರಗಳು, ಆಯ್ಕೆಯಾದ ತಳಿಗಳು, ವಿಷಯ ತಜ್ಞರ ಮಾತುಗಳು ‘ಫಲಪ್ರದ’ ಪುಸ್ತಕದ ಹೂರಣಗಳು.
ಪುಸ್ತಕದ ಲೇಖಕ : ನಾ. ಕಾರಂತ ಪೆರಾಜೆ. ಹಲಸು ಸ್ನೇಹಿ ಕೂಟದ ಪ್ರಕಾಶನ.  ಪುತ್ತೂರಿನ ಜೈನ್ ಭವನದಲ್ಲಿ ಮೇ 24 ರಂದು ಅಡಿಕೆ ಪತ್ರಿಕೆಯ ಪ್ರಕಾಶಕ ಪಡಾರು ರಾಮಕೃಷ್ಣ ಶಾಸ್ತ್ರಿಯವರು ‘ಫಲಪ್ರದ’ವನ್ನು ಅನಾವರಣಗೊಳಿಸುವರು. ಪುತ್ತೂರಿನ ಶಾಸಕ ಅಶೋಕ ಕುಮಾರ್ ರೈ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಡಾ.ದಿನಕರ ಅಡಿಗ, ಬಲರಾಮ ಆಚಾರ್ಯ, ಮುಳಿಯ ವೆಂಕಟಕೃಷ್ಣ ಶರ್ಮ ಇವರೆಲ್ಲರ ಶುಭಸೇಸೆಯೊಂದಿಗೆ ‘ಫಲಪ್ರದ’ ಪುಸ್ತಕ ಅನಾವರಣಗೊಳ್ಳಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

17 minutes ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

1 hour ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

10 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

18 hours ago