Advertisement
ಸುದ್ದಿಗಳು

ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’

Share
ಬಂಟ್ವಾಳ ತಾಲೂಕಿನ ಉಬರು-ಮುಳಿಯ ‘ಹಲಸು ಸ್ನೇಹಿ ಕೂಟ’ವು 2011ರಿಂದ ಸಕ್ರಿಯ. ಹಲಸು, ಗೆಡ್ಡೆ, ತರಕಾರಿ, ಮಾವು, ಕಾಡುಮಾವು, ಪುನರ್ಪುಳಿ, ಚಳಿಗಾಲದ ತರಕಾರಿ, ಸಿರಿಧಾನ್ಯ, ಸೊಪ್ಪು ತರಕಾರಿಗಳು, ಹಣ್ಣುಗಳ ಫಲಾಹಾರ.. ಹೀಗೆ ಅನ್ಯಾನ್ಯ ಕಾರ್ಯಕ್ರಮಗಳನ್ನು ಒಂದು ಗ್ರಾಮ ಮಟ್ಟದ ವ್ಯಾಪ್ತಿಯಲ್ಲಿ ನಡೆಸಿದೆ.
ಹಲಸು ಮತ್ತು ಮಾವಿನ ‘ರುಚಿ ನೋಡಿ ತಳಿ ಆಯ್ಕೆ’ ಮೂಲಕ ಸುಮಾರು ಐವತ್ತಕ್ಕೂ ಮಿಕ್ಕಿ ತಳಿಗಳು ಅಭಿವೃದ್ಧಿಗೊಂಡು ಕೃಷಿಕರ ತೋಟದಲ್ಲಿ ಬೆಳೆದಿವೆ. ಹಲಸಿನ ತೋಟಗಳು ಎದ್ದಿವೆ. ಮೌಲ್ಯವರ್ಧಿತ ಉತ್ಪನ್ನಗಳು ಸಿದ್ಧಗೊಂಡಿವೆ. ಸುಮಾರು ಇಪ್ಪತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಉತ್ತಮ ಹಲಸು-ಮಾವುಗಳನ್ನು ‘ಕೃಷಿಕರೇ’ ಆಯ್ಕೆ ಮಾಡಿರುವುದು ವಿಶೇಷ.
ಸಂಪರ್ಕಕ್ಕೆ ಬಂದ ಅನೇಕ ಮನೆಗಳಲ್ಲಿ ಹಲಸು, ಮಾವು, ಸಿರಿಧಾನ್ಯ.. ಹೀಗೆ ಖಾದ್ಯಗಳಿಗೆ ಮೊದಲ ಮಣೆ. ಸದ್ದಿಲ್ಲದೆ ದಶಕಕ್ಕೂ ಮಿಕ್ಕಿ ಕಲಾಪಗಳನ್ನು ನಡೆಸುವುದ ಮೂಲಕ ಕೃಷಿ, ಕೃಷಿಕರ ಆಸಕ್ತಿಗಳನ್ನು ಜೀವಂತವಿಟ್ಟಿದೆ.
ಹನ್ನೊಂದು ವರುಷದ ‘ಹಲಸು ಸ್ನೇಹಿ ಕೂಟ’ದ ಕಲಾಪಗಳ ವಿವರಗಳು, ಆಯ್ಕೆಯಾದ ತಳಿಗಳು, ವಿಷಯ ತಜ್ಞರ ಮಾತುಗಳು ‘ಫಲಪ್ರದ’ ಪುಸ್ತಕದ ಹೂರಣಗಳು.
ಪುಸ್ತಕದ ಲೇಖಕ : ನಾ. ಕಾರಂತ ಪೆರಾಜೆ. ಹಲಸು ಸ್ನೇಹಿ ಕೂಟದ ಪ್ರಕಾಶನ.  ಪುತ್ತೂರಿನ ಜೈನ್ ಭವನದಲ್ಲಿ ಮೇ 24 ರಂದು ಅಡಿಕೆ ಪತ್ರಿಕೆಯ ಪ್ರಕಾಶಕ ಪಡಾರು ರಾಮಕೃಷ್ಣ ಶಾಸ್ತ್ರಿಯವರು ‘ಫಲಪ್ರದ’ವನ್ನು ಅನಾವರಣಗೊಳಿಸುವರು. ಪುತ್ತೂರಿನ ಶಾಸಕ ಅಶೋಕ ಕುಮಾರ್ ರೈ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಡಾ.ದಿನಕರ ಅಡಿಗ, ಬಲರಾಮ ಆಚಾರ್ಯ, ಮುಳಿಯ ವೆಂಕಟಕೃಷ್ಣ ಶರ್ಮ ಇವರೆಲ್ಲರ ಶುಭಸೇಸೆಯೊಂದಿಗೆ ‘ಫಲಪ್ರದ’ ಪುಸ್ತಕ ಅನಾವರಣಗೊಳ್ಳಲಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago