Advertisement
ಸುದ್ದಿಗಳು

ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’

Share
ಬಂಟ್ವಾಳ ತಾಲೂಕಿನ ಉಬರು-ಮುಳಿಯ ‘ಹಲಸು ಸ್ನೇಹಿ ಕೂಟ’ವು 2011ರಿಂದ ಸಕ್ರಿಯ. ಹಲಸು, ಗೆಡ್ಡೆ, ತರಕಾರಿ, ಮಾವು, ಕಾಡುಮಾವು, ಪುನರ್ಪುಳಿ, ಚಳಿಗಾಲದ ತರಕಾರಿ, ಸಿರಿಧಾನ್ಯ, ಸೊಪ್ಪು ತರಕಾರಿಗಳು, ಹಣ್ಣುಗಳ ಫಲಾಹಾರ.. ಹೀಗೆ ಅನ್ಯಾನ್ಯ ಕಾರ್ಯಕ್ರಮಗಳನ್ನು ಒಂದು ಗ್ರಾಮ ಮಟ್ಟದ ವ್ಯಾಪ್ತಿಯಲ್ಲಿ ನಡೆಸಿದೆ.
ಹಲಸು ಮತ್ತು ಮಾವಿನ ‘ರುಚಿ ನೋಡಿ ತಳಿ ಆಯ್ಕೆ’ ಮೂಲಕ ಸುಮಾರು ಐವತ್ತಕ್ಕೂ ಮಿಕ್ಕಿ ತಳಿಗಳು ಅಭಿವೃದ್ಧಿಗೊಂಡು ಕೃಷಿಕರ ತೋಟದಲ್ಲಿ ಬೆಳೆದಿವೆ. ಹಲಸಿನ ತೋಟಗಳು ಎದ್ದಿವೆ. ಮೌಲ್ಯವರ್ಧಿತ ಉತ್ಪನ್ನಗಳು ಸಿದ್ಧಗೊಂಡಿವೆ. ಸುಮಾರು ಇಪ್ಪತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಉತ್ತಮ ಹಲಸು-ಮಾವುಗಳನ್ನು ‘ಕೃಷಿಕರೇ’ ಆಯ್ಕೆ ಮಾಡಿರುವುದು ವಿಶೇಷ.
ಸಂಪರ್ಕಕ್ಕೆ ಬಂದ ಅನೇಕ ಮನೆಗಳಲ್ಲಿ ಹಲಸು, ಮಾವು, ಸಿರಿಧಾನ್ಯ.. ಹೀಗೆ ಖಾದ್ಯಗಳಿಗೆ ಮೊದಲ ಮಣೆ. ಸದ್ದಿಲ್ಲದೆ ದಶಕಕ್ಕೂ ಮಿಕ್ಕಿ ಕಲಾಪಗಳನ್ನು ನಡೆಸುವುದ ಮೂಲಕ ಕೃಷಿ, ಕೃಷಿಕರ ಆಸಕ್ತಿಗಳನ್ನು ಜೀವಂತವಿಟ್ಟಿದೆ.
ಹನ್ನೊಂದು ವರುಷದ ‘ಹಲಸು ಸ್ನೇಹಿ ಕೂಟ’ದ ಕಲಾಪಗಳ ವಿವರಗಳು, ಆಯ್ಕೆಯಾದ ತಳಿಗಳು, ವಿಷಯ ತಜ್ಞರ ಮಾತುಗಳು ‘ಫಲಪ್ರದ’ ಪುಸ್ತಕದ ಹೂರಣಗಳು.
ಪುಸ್ತಕದ ಲೇಖಕ : ನಾ. ಕಾರಂತ ಪೆರಾಜೆ. ಹಲಸು ಸ್ನೇಹಿ ಕೂಟದ ಪ್ರಕಾಶನ.  ಪುತ್ತೂರಿನ ಜೈನ್ ಭವನದಲ್ಲಿ ಮೇ 24 ರಂದು ಅಡಿಕೆ ಪತ್ರಿಕೆಯ ಪ್ರಕಾಶಕ ಪಡಾರು ರಾಮಕೃಷ್ಣ ಶಾಸ್ತ್ರಿಯವರು ‘ಫಲಪ್ರದ’ವನ್ನು ಅನಾವರಣಗೊಳಿಸುವರು. ಪುತ್ತೂರಿನ ಶಾಸಕ ಅಶೋಕ ಕುಮಾರ್ ರೈ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಡಾ.ದಿನಕರ ಅಡಿಗ, ಬಲರಾಮ ಆಚಾರ್ಯ, ಮುಳಿಯ ವೆಂಕಟಕೃಷ್ಣ ಶರ್ಮ ಇವರೆಲ್ಲರ ಶುಭಸೇಸೆಯೊಂದಿಗೆ ‘ಫಲಪ್ರದ’ ಪುಸ್ತಕ ಅನಾವರಣಗೊಳ್ಳಲಿದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಂಚಗವ್ಯ ಚಿಕಿತ್ಸೆ… | ಏನಿದು ಪಂಚಗವ್ಯ…? | ಈ ಚಿಕಿತ್ಸೆ ಪರಿಣಾಮಕಾರಿ ಹೇಗೆ..?

ಪಂಚಗವ್ಯ ಚಿಕಿತ್ಸೆ ಎಂದರೆ ಏನು..? ಇದರ ಪ್ರಯೋಜನ ಏನು..?

13 hours ago

Karnataka Weather | 15-06-2024 | ಕೆಲವು ಕಡೆ ತುಂತುರು ಮಳೆ | ಜೂನ್ 21ರಿಂದ ಉತ್ತಮ ಮಳೆಯ ಮುನ್ಸೂಚನೆ |

ಈಗಿನಂತೆ ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ…

20 hours ago

ಕೇರಳದಲ್ಲಿ ಲಘು ಭೂಕಂಪ | ಬೆಳ್ಳಂಬೆಳಗ್ಗೆ ಭಯಭೀತಗೊಂಡು ಮನೆಯಿಂದ ಹೊರ ಬಂದ ಜನ |

ಕೇರಳದ ತ್ರಿಶೂರ್(Trishur) ಮತ್ತು ಪಾಲಕ್ಕಾಡ್(Palakhad) ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಲಘು ಭೂಕಂಪನವಾಗಿದೆ(LIGHT EARTHQUAKE).…

23 hours ago

ಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು | ಉಡುಪಿಯ ಈ ಬೀಚ್‌ಗಳಿಗೆ ಪ್ರವೇಶ ನಿರ್ಬಂಧ..!

ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ…

23 hours ago

ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ | ಕೃಷಿ ಸಚಿವ ಎಂ.ಬಿ ಪಾಟೀಲ್

ನಟ ದರ್ಶನ್‌(Actor Darshan) ಅವರನ್ನು  ಕೃಷಿ ಇಲಾಖೆಯ(Agricultural Department) ರಾಯಭಾರಿಯಾಗಿ(Ambassador) ನೇಮಕ ಮಾಡಿಕೊಳ್ಳಲಾಗಿತ್ತು.…

23 hours ago

G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra…

24 hours ago