ಜಮ್ಮು ಮತ್ತು ಕಾಶ್ಮೀರದ ಉಧಂಪುರ ಸ್ಲಾಥಿಯಾ ಚೌಕ್ನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ನಿಗೂಢವಾಗಿ ಉಂಟಾದ ಈ ಸ್ಫೋಟದ ನಿಖರವಾದ ಕಾರಣ ಮತ್ತು ತನಿಖೆ ನಡೆಸಲಾಗುತ್ತಿದೆ.
ಈ ಘಟನೆಯ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ಉದಮ್ಪುರದ ತಹಸೀಲ್ದಾರ್ ಕಚೇರಿ ಬಳಿ ‘ರೆಹ್ರಿ’ ಆಸುಪಾಸಿನಲ್ಲಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. 13 ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…