ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ | ಕೃಷ್ಣನಿಗಾಗಿ 108 ಬಗೆಯ ಲಡ್ಡು |

August 26, 2024
4:35 PM

ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ.ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದ್ದು, ವಿಟ್ಲ-ಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ.ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.

ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷ.

ಈ ಸಂದರ್ಭ ಮಾತನಾಡಿದ ಪುತ್ತಿಗೆ ಪರ್ಯಾಯದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ , ಈ ಬಾರಿ 108 ಬಗೆಯ ಲಡ್ಡುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಬಾಣಸಿಗ ರಾಘವೇಂದ್ರ ಭಟ್, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿಸಿದರು.

Source: D D

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror