ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ.ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದ್ದು, ವಿಟ್ಲ-ಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ.ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.
ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷ.
ಈ ಸಂದರ್ಭ ಮಾತನಾಡಿದ ಪುತ್ತಿಗೆ ಪರ್ಯಾಯದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ , ಈ ಬಾರಿ 108 ಬಗೆಯ ಲಡ್ಡುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಬಾಣಸಿಗ ರಾಘವೇಂದ್ರ ಭಟ್, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿಸಿದರು.
Source: D D
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…