ಕರಾವಳಿ ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳೇ ಹೆಚ್ಚಾಗುತ್ತಿದೆ. ಭತ್ತದ ಉತ್ಪಾದನೆಗೆ ಕಡಿಮೆ ಆದ್ಯತೆ ನೀಡಲಾಗುತ್ತಿದೆ. ಭತ್ತದ ನಾಟಿಯಿಂದ ತೊಡಗಿ ಇದು ಸಂಕಷ್ಟದ ಕೃಷಿ ಎಂದು ವಾಣಿಜ್ಯ ಬೆಳೆಯತ್ತ ಬಹುತೇಕ ಕೃಷಿಕರು ಆಸಕ್ತರಾಗಿದ್ದಾರೆ. ಈ ನಡುವೆಯೇ ಈ ಬಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರಿಗೆ ಒಟ್ಟು 47,390 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಉತ್ಪಾದನೆ ಗುರಿ ಹೊಂದಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 38 ಸಾವಿರ ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯಲ್ಲಿ 9,390 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಉತ್ಪಾದನೆ ಗುರಿಯನ್ನು ಇಲಾಖೆ ಹೊಂದಿದೆ. ಬಂಟ್ವಾಳ 1,510, ಬೆಳ್ತಂಗಡಿ 1,600, ಪುತ್ತೂರು 205, ಕಡಬ 165, ಸುಳ್ಯ 210 ಉಡುಪಿ 17,650, ಕುಂದಾಪುರ 13,250 ಹಾಗೂ ಕಾರ್ಕಳದಲ್ಲಿ 7,100 ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯ ಮಂಗಳೂರು 1,500, ಮೂಡುಬಿದಿರೆ 1,650, ಮೂಲ್ಕಿ 1,700, ಉಳ್ಳಾಲ 850 ಹೆಕ್ಟೇರ್ ಪ್ರದೇಶಗಳಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?