ಉಡುಪಿ ಸೀರೆ | ನಾರಿಯರಿಗೆ ಇದು ಇಷ್ಟವಾಗಬೇಕು ಏಕೆ ? | ಸಚಿವೆ ನಿರ್ಮಲಾ ಸೀತಾರಾಮನ್‌ ಪುತ್ರಿ ವಿವಾಹದಲ್ಲಿ ಕಂಡ ಉಡುಪಿ ಸೀರೆ…! |

June 12, 2023
7:14 PM

ಒಂದು ಕಾಲದ ವೈಭವದಿಂದ ಕಂಗೊಳಿಸುತ್ತಿದ್ದ ಉಡುಪಿ ಸೀರೆ ಈಗ ಮತ್ತೆ ಪುನಶ್ಚೇತನ ಕಾರ್ಯ ಆರಂಭವಾಗಿದೆ.  ಉಡುಪಿ ಮತ್ತು ದ. ಕ ಜಿಲ್ಲೆಗಳಲ್ಲಿ ತಯಾರಾಗುವ ಶುದ್ಧ ಒಂದೆಳೆ ಹತ್ತಿಯ ಕೈ ಮಗ್ಗ ಸೀರೆಗಳನ್ನು “ಉಡುಪಿ ಸೀರೆ” ಎಂದು ಪ್ರಸಿದ್ಧವಾಗುತ್ತಿದೆ. ಮಹಾತ್ಮಾ ಗಾಂಧೀಜಿಯವರಿಂದ ಪ್ರೇರೇಪಿತರಾಗಿ 8 ನೇಕಾರಿಕೆ ಸಂಘಗಳು ಸ್ಥಾಪನೆಯಾಗಿದ್ದವು.  ಇದೀಗ ದಿಕೆ ಟ್ರಸ್ಟ್‌ ಕಳೆದ ಕೆಲವು ಸಮಯಗಳಿಂದ ಉಡುಪಿ ನೇಕಾರಿಕೆ  ಬಗ್ಗೆ ಕೆಲಸ ಮಾಡುತ್ತಿದೆ. ಪುತ್ತೂರಿನ ಬಹುವಚನಂ ಪದ್ಮಿನೀ ಸಭಾಭವನದಲ್ಲಿ ಈ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು. 

ಉಡುಪಿ ಸೀರೆಯನ್ನು ವಿಶೇಷ ವಿನ್ಯಾಸದಲ್ಲಿ  ಒಂದೆಳೆಯ ಹತ್ತಿಯ ನೂಲನ್ನು ಬಳಸಿ ನೇಯಲಾಗುತ್ತದೆ. ಈ ಸೀರೆ ತಯಾರಿಯ ವಿಶಿಷ್ಟ ತಂತ್ರಗಾರಿಕೆ ಮತ್ತು ವಿನ್ಯಾಸಕ್ಕಾಗಿ ಉಡುಪಿ ಸೀರೆಗೆ ಭೌ ಗೋಳಿಕ ಭಿನ್ನತೆ ಅಂಕಿತ, GI Tag 2016ರಲ್ಲಿ ಜಿ ಐ ಮಾನ್ಯತೆ ದೊರೆತಿದೆ. ಹೊಸ ವಿನ್ಯಾಸದ ಉಡುಪಿ ಸೀರೆಗಳು ಉಡಲು ಬಹಳ ಆರಾಮದಾಯಕವಾಗಿದ್ದು ಮನ ಸೆಳೆಯುವ ಬಣ್ಣದಿಂದ ಕೂಡಿರುತ್ತದೆ, ಹೀಗಾಗಿ ಈಚೆಗೆ ಉಡುಪಿ ಸೀರೆ ಹೆಚ್ಚು ಗಮನ ಸೆಳೆದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ  ಪುತ್ರಿ ವಾಙ್ಮಯಿ ಅವರ ವಿವಾಹ ಸಮಾರಂಭಕ್ಕೆ ಉಡುಪಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ  ಸೀರೆ, ಶಾಲು ಮೂಲಕ  ಹರಸಿದ್ದರು.

ಕದಿಕೆ ಟ್ರಸ್ಟ್‌ ಈ ಉದ್ಯಮ ಉಳಿಯುವುದಕ್ಕೆ , ಉಳಿಸುವುದಕ್ಕೆ ಸತತ ಪ್ರಯತ್ನ ಮಾಡುತ್ತಿದೆ. ಪುತ್ತೂರಿನ ಬಹುವಚನಂ ಪದ್ಮಿನೀ ಸಭಾಭವನದಲ್ಲಿ ಈ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕದಿಕೆ ಟ್ರಸ್ಟ್‌ನ ಮಮತಾ ರೈ ಹಾಗೂ ಬಿಸಿ ಶೆಟ್ಟಿ  ಅವರು ಉಡುಪಿ ಸೀರೆ ಹಾಗೂ ಅಲ್ಲಿನ ನೇಕಾರಿಗೆ ಬಗ್ಗೆ ಮಾಹಿತಿ ನೀಡಿದರು. ನೇಕಾರಿಗೆ ಉಳಿಸುವುದು  ಹಾಗೂ ಹೊಸ ತಲೆಮಾರಿನ ಮಂದಿ ಈ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವ ಸವಾಲುಗಳ ಬಗ್ಗೆ ಮಾಹಿತಿ ನೀಡಿದರು.

ಕದಿಕೆ ಟ್ರಸ್ಟ್, ತಾಳಿಪಾಡಿ ಸಂಘದ ಜೊತೆ ಸೇರಿ ಅನೇಕ ಬಿಟ್ಟು ಹೋದ ನೇಕಾರರು ಮತ್ತೆ ನೇಕಾರಿಕೆಗೆ ಬರುವಂತೆ ಮಾಡಿದೆ. ಟ್ರಸ್ಟ್, ನಬಾರ್ಡ್ ಸಂಸ್ಥೆಯ ನೆರವಿನಿಂದ ನೇಕಾರಿಕಾ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ. 2018 ರಲ್ಲಿ ತಾಳಿಪಾಡಿ ಸಂಘದಲ್ಲಿ 8 ಇದ್ದ ನೇಕಾರರ ಸಂಖ್ಯೆ ಈಗ 34ಕ್ಕೆ ಏರಿದೆ. ಎರಡು ಜಿಲ್ಲೆಗಳಲ್ಲಿ 45 ರಷ್ಟು ಇದ್ದ ನೇಕಾರರ ಸಂಖ್ಯೆ 72 ಕ್ಕೆ ಏರಿದೆ.  ಹೊಸ ನೇಕಾರರು ಉಡುಪಿ ಸೀರೆ ನೇಕಾರಿಕೆ ಮುಂದುವರಿಸುವ ಭರವಸೆ ಮೂಡಿಸಿದ್ದಾರೆ ಎಂದು ಅವರು ವಿವರಿಸಿದರು. ( ಆಡಿಯೋ ಇಲ್ಲಿದೆ )

ಉಡುಪಿ ಸೀರೆಯ ವಿನ್ಯಾಸ ಹಾಗೂ ಹವಾಮಾನದ ಎಲ್ಲಾ ಕಾಲದಲ್ಲೂ ಉಪಯುಕ್ತವಾಗಿ ಈ ಉಡುಗೆಯ ಕಡೆಗೆ ನಾರಿಯರು ಹಾಗೂ ಜನರು ಬೆಂಬಲಿಸಬೇಕಿದೆ. ಈ ಉದ್ಯಮ ಬೆಳೆವಣಿಗೆಯ ಕಾರಣದಿಂದ ಪರಿಸರದ ಮೇಲೂ ಧನಾತ್ಮಕ ಪರಿಣಾಮಗಳು ಇದ್ದರೆ, ಗ್ರಾಮೀಣ ಉದ್ಯಮಗಳು ಬೆಳೆಯುತ್ತವೆ, ಉದ್ಯೋಗ ಸೃಷ್ಟಿ ಸಾಧ್ಯವಿದೆ. ಅದರ ಜೊತೆಗೆ ಗ್ರಾಮೀಣ ಆರ್ಥಿಕತೆಯ ಮೂಲಕ ಸ್ವಾವಲಂಬೀ ಬದುಕು ಸಾಧ್ಯವಿದೆ ಎನ್ನುವುದು  ಆಶಯವಾಗಿದೆ.

ಕಾರ್ಯಕ್ರಮದಲ್ಲಿ ಉಪನ್ಯಾಸಕ ಡಾ.ಶ್ರೀಶಕುಮಾರ್‌ ಸ್ವಾಗತಿಸಿದರು. ಐ ಕೆ ಬೊಳುವಾರು ಪ್ರಸ್ತಾವನೆಗೈದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror