88 ವಿವಿಧ ಉದ್ಯಮ ಆರಂಭಿಸಲು ಸರ್ಕಾರದ ಸಹಾಯ : 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ

March 3, 2023
12:41 PM

ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲೀಕರಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತೆ.  ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಸರ್ಕಾರ ಅನೇಕರೀತಿಯ ಸಾಲವನ್ನು ನೀಡುತ್ತಿದೆ.

ಉದ್ಯೋಗಿನಿ ಯೋಜನೆಯಡಿ ಸರ್ಕಾರವು ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಸಮಾಜದ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಈ ಯೋಜನೆಯಲ್ಲಿ  ವಿಧವೆಯರಿಗೆ, ನಿರ್ಗತಿಕ ಮಹಿಳೆಯರಿಗೆ, ಅಂಗವಿಕಲರಿಗೆ ವಿಶೇಷ ಪ್ರಾತಿನಿದ್ಯ ನೀಡಲಾಗುತ್ತದೆ.

ಸುಮಾರು 88 ವಿವಿಧ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ನೀಡಲಾಗುತ್ತದೆ. ಹೊಲಿಗೆ, ಮತ್ಸೋದ್ಯಮ, ದಿನಸಿ ಮಾರಾಟ, ಆಗರಬತ್ತಿ ತಯಾರಿಕೆ, ಬೇಕರಿ, ಗ್ರಂಥಾಲಯ ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೇ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಅದು ಯಾವುದೇ ಬಡ್ಡಿ ಇಲ್ಲದೇ ಕೊಡಲಾಗುತ್ತದೆ.

ಈ ಎಲ್ಲಾ ಅರ್ಹತೆಗಳಿದ್ದೆ ಸಾಕು..

  • 18-50 ವರ್ಷದ ಮಹಿಳೆಯರು ಅರ್ಹರಾಗಿರುತ್ತಾರೆ.
  • ಮಹಿಳೆಯರ ಕುಟುಂಬದ ಆದಾಯ5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾಗಿದ್ದರೆ ಕುಟುಂಬದಲ್ಲಿ ಹೆಚ್ಚಿನ ಆದಾಯವಿದ್ದರೆ ಸಾಲ ನೀಡಲು ಪರಿಗಣಿಸಲಾಗುತ್ತದೆ.

ಬೇಕಾದ ದಾಖಲೆಗಳು :

  • ಆಧಾರ್‌ ಕಾರ್ಡ್‌
  • ಜನನ ಪ್ರಮಾಣ ಪತ್ರ
  • ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್‌ ಹೆಡ್‌ ಇರುವ ಪ್ರಮಾಣ ಪತ್ರ
  • ಬಿಪಿಎಲ್‌ ರೇಷನ್‌ ಕಾರ್ಡ್‌ ಜೆರಾಕ್ಸ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ನಿಮ್ಮ ಸ್ಥಳೀಯ ಬ್ಯಾಂಕುಗಳಲ್ಲಿ ಭೇಟಿ ನೀಡುವುದರ ಮೂಲಕ ಸರ್ಕಾರ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು ಅಂದರೆ 3 ಲಕ್ಷ ಸಾಲವನ್ನು ಕೊಡಲಾಗುತ್ತದೆ. ಅದರಲ್ಲಿ 90,000 ಸಾವಿರ ಹಣವನ್ನು ಉಚಿತವಾಗಿ ನೀಡುತ್ತಾರೆ. ಪ್ರತಿಯೊಬ್ಬ ಮಹಿಳೆಯರೂ ಇದರ ಪ್ರಯೋಜನ ಪಡೆದು, ಸ್ವಂತ ಉದ್ಯೋಗವನ್ನು ಆರಂಭಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror