Advertisement
ಮಾಹಿತಿ

88 ವಿವಿಧ ಉದ್ಯಮ ಆರಂಭಿಸಲು ಸರ್ಕಾರದ ಸಹಾಯ : 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ

Share

ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲೀಕರಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತೆ.  ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಸರ್ಕಾರ ಅನೇಕರೀತಿಯ ಸಾಲವನ್ನು ನೀಡುತ್ತಿದೆ.

ಉದ್ಯೋಗಿನಿ ಯೋಜನೆಯಡಿ ಸರ್ಕಾರವು ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಸಮಾಜದ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಈ ಯೋಜನೆಯಲ್ಲಿ  ವಿಧವೆಯರಿಗೆ, ನಿರ್ಗತಿಕ ಮಹಿಳೆಯರಿಗೆ, ಅಂಗವಿಕಲರಿಗೆ ವಿಶೇಷ ಪ್ರಾತಿನಿದ್ಯ ನೀಡಲಾಗುತ್ತದೆ.

ಸುಮಾರು 88 ವಿವಿಧ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ನೀಡಲಾಗುತ್ತದೆ. ಹೊಲಿಗೆ, ಮತ್ಸೋದ್ಯಮ, ದಿನಸಿ ಮಾರಾಟ, ಆಗರಬತ್ತಿ ತಯಾರಿಕೆ, ಬೇಕರಿ, ಗ್ರಂಥಾಲಯ ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೇ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಅದು ಯಾವುದೇ ಬಡ್ಡಿ ಇಲ್ಲದೇ ಕೊಡಲಾಗುತ್ತದೆ.

ಈ ಎಲ್ಲಾ ಅರ್ಹತೆಗಳಿದ್ದೆ ಸಾಕು..

  • 18-50 ವರ್ಷದ ಮಹಿಳೆಯರು ಅರ್ಹರಾಗಿರುತ್ತಾರೆ.
  • ಮಹಿಳೆಯರ ಕುಟುಂಬದ ಆದಾಯ5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾಗಿದ್ದರೆ ಕುಟುಂಬದಲ್ಲಿ ಹೆಚ್ಚಿನ ಆದಾಯವಿದ್ದರೆ ಸಾಲ ನೀಡಲು ಪರಿಗಣಿಸಲಾಗುತ್ತದೆ.

ಬೇಕಾದ ದಾಖಲೆಗಳು :

  • ಆಧಾರ್‌ ಕಾರ್ಡ್‌
  • ಜನನ ಪ್ರಮಾಣ ಪತ್ರ
  • ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್‌ ಹೆಡ್‌ ಇರುವ ಪ್ರಮಾಣ ಪತ್ರ
  • ಬಿಪಿಎಲ್‌ ರೇಷನ್‌ ಕಾರ್ಡ್‌ ಜೆರಾಕ್ಸ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ನಿಮ್ಮ ಸ್ಥಳೀಯ ಬ್ಯಾಂಕುಗಳಲ್ಲಿ ಭೇಟಿ ನೀಡುವುದರ ಮೂಲಕ ಸರ್ಕಾರ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು ಅಂದರೆ 3 ಲಕ್ಷ ಸಾಲವನ್ನು ಕೊಡಲಾಗುತ್ತದೆ. ಅದರಲ್ಲಿ 90,000 ಸಾವಿರ ಹಣವನ್ನು ಉಚಿತವಾಗಿ ನೀಡುತ್ತಾರೆ. ಪ್ರತಿಯೊಬ್ಬ ಮಹಿಳೆಯರೂ ಇದರ ಪ್ರಯೋಜನ ಪಡೆದು, ಸ್ವಂತ ಉದ್ಯೋಗವನ್ನು ಆರಂಭಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

52 minutes ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

1 hour ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

10 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

11 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

11 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

20 hours ago