ಮಾಹಿತಿ

88 ವಿವಿಧ ಉದ್ಯಮ ಆರಂಭಿಸಲು ಸರ್ಕಾರದ ಸಹಾಯ : 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲೀಕರಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತೆ.  ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಸರ್ಕಾರ ಅನೇಕರೀತಿಯ ಸಾಲವನ್ನು ನೀಡುತ್ತಿದೆ.

Advertisement

ಉದ್ಯೋಗಿನಿ ಯೋಜನೆಯಡಿ ಸರ್ಕಾರವು ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಸಮಾಜದ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಈ ಯೋಜನೆಯಲ್ಲಿ  ವಿಧವೆಯರಿಗೆ, ನಿರ್ಗತಿಕ ಮಹಿಳೆಯರಿಗೆ, ಅಂಗವಿಕಲರಿಗೆ ವಿಶೇಷ ಪ್ರಾತಿನಿದ್ಯ ನೀಡಲಾಗುತ್ತದೆ.

ಸುಮಾರು 88 ವಿವಿಧ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ನೀಡಲಾಗುತ್ತದೆ. ಹೊಲಿಗೆ, ಮತ್ಸೋದ್ಯಮ, ದಿನಸಿ ಮಾರಾಟ, ಆಗರಬತ್ತಿ ತಯಾರಿಕೆ, ಬೇಕರಿ, ಗ್ರಂಥಾಲಯ ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೇ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಅದು ಯಾವುದೇ ಬಡ್ಡಿ ಇಲ್ಲದೇ ಕೊಡಲಾಗುತ್ತದೆ.

ಈ ಎಲ್ಲಾ ಅರ್ಹತೆಗಳಿದ್ದೆ ಸಾಕು..

  • 18-50 ವರ್ಷದ ಮಹಿಳೆಯರು ಅರ್ಹರಾಗಿರುತ್ತಾರೆ.
  • ಮಹಿಳೆಯರ ಕುಟುಂಬದ ಆದಾಯ5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾಗಿದ್ದರೆ ಕುಟುಂಬದಲ್ಲಿ ಹೆಚ್ಚಿನ ಆದಾಯವಿದ್ದರೆ ಸಾಲ ನೀಡಲು ಪರಿಗಣಿಸಲಾಗುತ್ತದೆ.

ಬೇಕಾದ ದಾಖಲೆಗಳು :

  • ಆಧಾರ್‌ ಕಾರ್ಡ್‌
  • ಜನನ ಪ್ರಮಾಣ ಪತ್ರ
  • ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್‌ ಹೆಡ್‌ ಇರುವ ಪ್ರಮಾಣ ಪತ್ರ
  • ಬಿಪಿಎಲ್‌ ರೇಷನ್‌ ಕಾರ್ಡ್‌ ಜೆರಾಕ್ಸ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ನಿಮ್ಮ ಸ್ಥಳೀಯ ಬ್ಯಾಂಕುಗಳಲ್ಲಿ ಭೇಟಿ ನೀಡುವುದರ ಮೂಲಕ ಸರ್ಕಾರ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು ಅಂದರೆ 3 ಲಕ್ಷ ಸಾಲವನ್ನು ಕೊಡಲಾಗುತ್ತದೆ. ಅದರಲ್ಲಿ 90,000 ಸಾವಿರ ಹಣವನ್ನು ಉಚಿತವಾಗಿ ನೀಡುತ್ತಾರೆ. ಪ್ರತಿಯೊಬ್ಬ ಮಹಿಳೆಯರೂ ಇದರ ಪ್ರಯೋಜನ ಪಡೆದು, ಸ್ವಂತ ಉದ್ಯೋಗವನ್ನು ಆರಂಭಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

19 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

20 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

20 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

1 day ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

2 days ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

2 days ago