ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆ ಹಾಗೂ ಲೈನ್ ದುರಸ್ತಿ ಸಮಸ್ಯೆಗೆ ಪರಿಹಾರವಾಗಿ ಗ್ರಾಮೀಣ ಭಾಗದಲ್ಲೂ ಭೂಗತ ಕೇಬಲ್ ಮೂಲಕ ಸಂಪರ್ಕ ನೀಡಬೇಕು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಸಂಪಾಜೆ ಗೂನಡ್ಕದ ನಿವಾಸಿಗಳಾದ ಇಸ್ಮಾಯಿಲ್ ಹಾಗೂ ಚಿದಾನಂದ ಅವರು ನಾಗರಿಕರ ಪರವಾಗಿ ಮನವಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿ ಕಾಡುತ್ತದೆ. ಗಾಳಿ ಮಳೆಗೆ ಕಂಬಗಳು ತುಂಡಾಗುತ್ತದೆ. ಗ್ರಾಮೀಣ ಭಾಗದಲ್ಲಿ ಭೀಕರ ಗಾಳಿ ಮಳೆಗೆ ಮರ ಬಿದ್ದು ಕಂಬ ತುಂಡಾಗುತ್ತದೆ. ಹೀಗಾಗಿ ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾಗುವುದು ಪ್ರತೀ ವರ್ಷ ಇದೆ. ಇದನ್ನು ದುರಸ್ತಿಪಡಿಸಲು ಕೂಡಾ ವೆಚ್ಚದಾಯುಕವೂ ಆಗುತ್ತಿದೆ. ಹೀಗಾಗಿ ಈ ಸಮಸ್ಯೆ ನಿವಾರಣೆಗೆ ದ ಕ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕೂಡಾ ಭೂಗತ ಕೇಬಲ್ ಅಳವಡಿಕೆ ಮಾಡಿ ವಿದ್ಯುತ್ ಸಂಪರ್ಕಕ್ಕೆ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…