ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆ ಹಾಗೂ ಲೈನ್ ದುರಸ್ತಿ ಸಮಸ್ಯೆಗೆ ಪರಿಹಾರವಾಗಿ ಗ್ರಾಮೀಣ ಭಾಗದಲ್ಲೂ ಭೂಗತ ಕೇಬಲ್ ಮೂಲಕ ಸಂಪರ್ಕ ನೀಡಬೇಕು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಸಂಪಾಜೆ ಗೂನಡ್ಕದ ನಿವಾಸಿಗಳಾದ ಇಸ್ಮಾಯಿಲ್ ಹಾಗೂ ಚಿದಾನಂದ ಅವರು ನಾಗರಿಕರ ಪರವಾಗಿ ಮನವಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿ ಕಾಡುತ್ತದೆ. ಗಾಳಿ ಮಳೆಗೆ ಕಂಬಗಳು ತುಂಡಾಗುತ್ತದೆ. ಗ್ರಾಮೀಣ ಭಾಗದಲ್ಲಿ ಭೀಕರ ಗಾಳಿ ಮಳೆಗೆ ಮರ ಬಿದ್ದು ಕಂಬ ತುಂಡಾಗುತ್ತದೆ. ಹೀಗಾಗಿ ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾಗುವುದು ಪ್ರತೀ ವರ್ಷ ಇದೆ. ಇದನ್ನು ದುರಸ್ತಿಪಡಿಸಲು ಕೂಡಾ ವೆಚ್ಚದಾಯುಕವೂ ಆಗುತ್ತಿದೆ. ಹೀಗಾಗಿ ಈ ಸಮಸ್ಯೆ ನಿವಾರಣೆಗೆ ದ ಕ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕೂಡಾ ಭೂಗತ ಕೇಬಲ್ ಅಳವಡಿಕೆ ಮಾಡಿ ವಿದ್ಯುತ್ ಸಂಪರ್ಕಕ್ಕೆ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…