ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆ ಹಾಗೂ ಲೈನ್ ದುರಸ್ತಿ ಸಮಸ್ಯೆಗೆ ಪರಿಹಾರವಾಗಿ ಗ್ರಾಮೀಣ ಭಾಗದಲ್ಲೂ ಭೂಗತ ಕೇಬಲ್ ಮೂಲಕ ಸಂಪರ್ಕ ನೀಡಬೇಕು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಸಂಪಾಜೆ ಗೂನಡ್ಕದ ನಿವಾಸಿಗಳಾದ ಇಸ್ಮಾಯಿಲ್ ಹಾಗೂ ಚಿದಾನಂದ ಅವರು ನಾಗರಿಕರ ಪರವಾಗಿ ಮನವಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿ ಕಾಡುತ್ತದೆ. ಗಾಳಿ ಮಳೆಗೆ ಕಂಬಗಳು ತುಂಡಾಗುತ್ತದೆ. ಗ್ರಾಮೀಣ ಭಾಗದಲ್ಲಿ ಭೀಕರ ಗಾಳಿ ಮಳೆಗೆ ಮರ ಬಿದ್ದು ಕಂಬ ತುಂಡಾಗುತ್ತದೆ. ಹೀಗಾಗಿ ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾಗುವುದು ಪ್ರತೀ ವರ್ಷ ಇದೆ. ಇದನ್ನು ದುರಸ್ತಿಪಡಿಸಲು ಕೂಡಾ ವೆಚ್ಚದಾಯುಕವೂ ಆಗುತ್ತಿದೆ. ಹೀಗಾಗಿ ಈ ಸಮಸ್ಯೆ ನಿವಾರಣೆಗೆ ದ ಕ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕೂಡಾ ಭೂಗತ ಕೇಬಲ್ ಅಳವಡಿಕೆ ಮಾಡಿ ವಿದ್ಯುತ್ ಸಂಪರ್ಕಕ್ಕೆ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…