Advertisement
ಸುದ್ದಿಗಳು

ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

Share

ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.

ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ  ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

5 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

5 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

11 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

12 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

14 hours ago