Advertisement
ಸುದ್ದಿಗಳು

ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

Share

ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.

ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ  ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

14 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

15 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

23 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago