Advertisement
ಸುದ್ದಿಗಳು

ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

Share

ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.

ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ  ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

19 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago