Advertisement
ಸುದ್ದಿಗಳು

ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

Share

ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.

ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ  ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago