ರಷ್ಯಾ-ಉಕ್ರೇನ್‌ ಯುದ್ಧ | ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಭಾರತ ಸರ್ಕಾರ ತ್ವರಿತ ಕ್ರಮ |

March 3, 2022
11:44 AM

(Source:ANI) ಫೆಬ್ರವರಿ 24 ರಂದು ರಷ್ಯಾದ ಪಡೆಗಳು ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಹಾಗೂ ಪ್ರಜೆಗಳನ್ನು ಮರಳಿ ಕರೆತರಲು ಭಾರತ ಸರ್ಕಾರವು ‘ಆಪರೇಷನ್ ಗಂಗಾ’ವನ್ನು ಪ್ರಾರಂಭಿಸಿದೆ. ಈ ಕಾರ್ಯದಲ್ಲಿ ಇದೀಗ ವಾಯುಪಡೆ ಜೊತೆಯಾಗಿದೆ. ಇಂದು, ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಉಕ್ರೇನ್‌ನ ನೆರೆಹೊರೆಯ ವಿವಿಧ ಸ್ಥಳಗಳಿಗೆ ವಾಯುಪಡೆಯು ಇನ್ನೂ ಮೂರು ವಿಮಾನಗಳನ್ನು ಕಳುಹಿಸುತ್ತಿದೆ ಎಂದು ಭಾರತೀಯ ವಾಯುಪಡೆಯ ವಕ್ತಾರರು ಮಾಹಿತಿ ನೀಡಿದ್ದಾರೆ.

ರಷ್ಯಾ ಉಕ್ರೇನ್‌ ಸಂಘರ್ಷದ ಬಳಿಕ ಭಾರತೀಯ ಪ್ರಜೆಗಳ ರಕ್ಷಣೆಯಲ್ಲಿ ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತಿರುವಂತೆಯೇ ದೇಶದ ಪ್ರತೀ ರಾಜ್ಯಗಳೂ ಸಹಾಯ ಮಾಡುತ್ತಿವೆ. ಫೆ.24 ರ ನಂತರ ಉಕ್ರೇನ್‌ ವಿವಿಧ ಭಾಗಗಳಿಂದ ಭಾರತೀಯರ ರಕ್ಷಣೆ ಮಾಡುತ್ತಿರುವಂತೆಯೇ ಸುಮಾರು 20,000 ಭಾರತೀಯರ ಪೈಕಿ ಮಂಗಳವಾರದ ಹೊತ್ತಿಗೆ ಸುಮಾರು 8,000 ಭಾರತೀಯರು, ಮುಖ್ಯವಾಗಿ ವಿದ್ಯಾರ್ಥಿಗಳು, ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮಾಹಿತಿ ನೀಡಿದ್ದರು. ಇದೀಗ ಅವರೆಲ್ಲರ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಧಾಳಿ ನಡೆಯುತ್ತಿರುವ ನಗರಗಳಿಂದ ರಕ್ಷಣೆ ಮಾಡುವ ಸವಾಲಿನ ಕೆಲಸವನ್ನು ಈಗ ನಡೆಸಲಾಗುತ್ತಿದೆ. ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಉಕ್ರೇನ್‌ನ ಪಶ್ಚಿಮ ನೆರೆಹೊರೆಯ ನಾಲ್ವರು ಕೇಂದ್ರ ಸಚಿವರು ಹೋಗಿದ್ದಾರೆ.

Advertisement

ಬುಡಾಪೆಸ್ಟ್ (ಹಂಗೇರಿ) ನಿಂದ ಭಾರತೀಯರನ್ನು ಹೊತ್ತ ವಿಮಾನ ಇಂದು ಮುಂಜಾನೆ ದೆಹಲಿಗೆ ಬಂದಿಳಿಯಿತು.ಕೇಂದ್ರ ಮಂತ್ರಿಗಳಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ವೀರೇಂದ್ರ ಕುಮಾರ್ ಅವರು ಬುಡಾಪೆಸ್ಟ್ (ಹಂಗೇರಿ) ಮೂಲಕ ಯುದ್ಧ ಪೀಡಿತ ಉಕ್ರೇನ್‌ ನಿಂದ ಬಂದ ಭಾರತೀಯರನ್ನು ಸ್ವಾಗತಿಸಿದ್ದಾರೆ.ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿಗಳು, ಕೀವ್‌ ಮತ್ತು ಖಾರ್ಕಿವ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಸ್ಥಳಾಂತರಿಸಬೇಕಿದೆ ಎಂದು ದೆಹಲಿ ವಿಮಾನ ನಿಲ್ದಾಣ ತಲುಪಿದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.

ಇಂದು ಉಕ್ರೇನ್‌ನಿಂದ ದೆಹಲಿಗೆ ಆಗಮಿಸುವ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಕೇರಳ ರಾಜ್ಯ ಸರ್ಕಾರ ಮೂರು ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಕೊಚ್ಚಿ ವಿಮಾನ ನಿಲ್ದಾಣದಿಂದ ತಿರುವನಂತಪುರಂ ಮತ್ತು ಕಾಸರಗೋಡಿಗೆ ಬಸ್‌ ವ್ಯವಸ್ಥೆ ಮಾಡಲಾಗುತ್ತಿದೆ. ಉಕ್ರೇನ್‌ನಿಂದ ಹಿಂದಿರುಗಿದವರಿಗೆ ಸಹಾಯ ಮಾಡಲು ರಾಜ್ಯದ ಎಲ್ಲಾ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

Advertisement

ಈ ನಡುವೆ ರಷ್ಯಾ ಮತ್ತು ಉಕ್ರೇನ್ ನಡುವೆ ಎರಡನೇ ಸುತ್ತಿನ ಮಾತುಕತೆ ಇಂದು ನಡೆಯಲಿದೆ. ರಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರು ಉಕ್ರೇನ್ ಯುದ್ಧದಲ್ಲಿ ತನ್ನ 498 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 1,597 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror