Advertisement
ರಾಷ್ಟ್ರೀಯ

ರಷ್ಯಾ-ಉಕ್ರೇನ್‌ ಯುದ್ಧ | ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಭಾರತ ಸರ್ಕಾರ ತ್ವರಿತ ಕ್ರಮ |

Share

(Source:ANI) ಫೆಬ್ರವರಿ 24 ರಂದು ರಷ್ಯಾದ ಪಡೆಗಳು ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಹಾಗೂ ಪ್ರಜೆಗಳನ್ನು ಮರಳಿ ಕರೆತರಲು ಭಾರತ ಸರ್ಕಾರವು ‘ಆಪರೇಷನ್ ಗಂಗಾ’ವನ್ನು ಪ್ರಾರಂಭಿಸಿದೆ. ಈ ಕಾರ್ಯದಲ್ಲಿ ಇದೀಗ ವಾಯುಪಡೆ ಜೊತೆಯಾಗಿದೆ. ಇಂದು, ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಉಕ್ರೇನ್‌ನ ನೆರೆಹೊರೆಯ ವಿವಿಧ ಸ್ಥಳಗಳಿಗೆ ವಾಯುಪಡೆಯು ಇನ್ನೂ ಮೂರು ವಿಮಾನಗಳನ್ನು ಕಳುಹಿಸುತ್ತಿದೆ ಎಂದು ಭಾರತೀಯ ವಾಯುಪಡೆಯ ವಕ್ತಾರರು ಮಾಹಿತಿ ನೀಡಿದ್ದಾರೆ.

Advertisement
Advertisement

ರಷ್ಯಾ ಉಕ್ರೇನ್‌ ಸಂಘರ್ಷದ ಬಳಿಕ ಭಾರತೀಯ ಪ್ರಜೆಗಳ ರಕ್ಷಣೆಯಲ್ಲಿ ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತಿರುವಂತೆಯೇ ದೇಶದ ಪ್ರತೀ ರಾಜ್ಯಗಳೂ ಸಹಾಯ ಮಾಡುತ್ತಿವೆ. ಫೆ.24 ರ ನಂತರ ಉಕ್ರೇನ್‌ ವಿವಿಧ ಭಾಗಗಳಿಂದ ಭಾರತೀಯರ ರಕ್ಷಣೆ ಮಾಡುತ್ತಿರುವಂತೆಯೇ ಸುಮಾರು 20,000 ಭಾರತೀಯರ ಪೈಕಿ ಮಂಗಳವಾರದ ಹೊತ್ತಿಗೆ ಸುಮಾರು 8,000 ಭಾರತೀಯರು, ಮುಖ್ಯವಾಗಿ ವಿದ್ಯಾರ್ಥಿಗಳು, ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮಾಹಿತಿ ನೀಡಿದ್ದರು. ಇದೀಗ ಅವರೆಲ್ಲರ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಧಾಳಿ ನಡೆಯುತ್ತಿರುವ ನಗರಗಳಿಂದ ರಕ್ಷಣೆ ಮಾಡುವ ಸವಾಲಿನ ಕೆಲಸವನ್ನು ಈಗ ನಡೆಸಲಾಗುತ್ತಿದೆ. ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಉಕ್ರೇನ್‌ನ ಪಶ್ಚಿಮ ನೆರೆಹೊರೆಯ ನಾಲ್ವರು ಕೇಂದ್ರ ಸಚಿವರು ಹೋಗಿದ್ದಾರೆ.

ಬುಡಾಪೆಸ್ಟ್ (ಹಂಗೇರಿ) ನಿಂದ ಭಾರತೀಯರನ್ನು ಹೊತ್ತ ವಿಮಾನ ಇಂದು ಮುಂಜಾನೆ ದೆಹಲಿಗೆ ಬಂದಿಳಿಯಿತು.ಕೇಂದ್ರ ಮಂತ್ರಿಗಳಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ವೀರೇಂದ್ರ ಕುಮಾರ್ ಅವರು ಬುಡಾಪೆಸ್ಟ್ (ಹಂಗೇರಿ) ಮೂಲಕ ಯುದ್ಧ ಪೀಡಿತ ಉಕ್ರೇನ್‌ ನಿಂದ ಬಂದ ಭಾರತೀಯರನ್ನು ಸ್ವಾಗತಿಸಿದ್ದಾರೆ.ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿಗಳು, ಕೀವ್‌ ಮತ್ತು ಖಾರ್ಕಿವ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಸ್ಥಳಾಂತರಿಸಬೇಕಿದೆ ಎಂದು ದೆಹಲಿ ವಿಮಾನ ನಿಲ್ದಾಣ ತಲುಪಿದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.

ಇಂದು ಉಕ್ರೇನ್‌ನಿಂದ ದೆಹಲಿಗೆ ಆಗಮಿಸುವ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಕೇರಳ ರಾಜ್ಯ ಸರ್ಕಾರ ಮೂರು ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಕೊಚ್ಚಿ ವಿಮಾನ ನಿಲ್ದಾಣದಿಂದ ತಿರುವನಂತಪುರಂ ಮತ್ತು ಕಾಸರಗೋಡಿಗೆ ಬಸ್‌ ವ್ಯವಸ್ಥೆ ಮಾಡಲಾಗುತ್ತಿದೆ. ಉಕ್ರೇನ್‌ನಿಂದ ಹಿಂದಿರುಗಿದವರಿಗೆ ಸಹಾಯ ಮಾಡಲು ರಾಜ್ಯದ ಎಲ್ಲಾ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

ಈ ನಡುವೆ ರಷ್ಯಾ ಮತ್ತು ಉಕ್ರೇನ್ ನಡುವೆ ಎರಡನೇ ಸುತ್ತಿನ ಮಾತುಕತೆ ಇಂದು ನಡೆಯಲಿದೆ. ರಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರು ಉಕ್ರೇನ್ ಯುದ್ಧದಲ್ಲಿ ತನ್ನ 498 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 1,597 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

9 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago