ರಷ್ಯಾದ ಪಡೆಗಳಿಂದ ಇತ್ತೀಚೆಗೆ ಆಕ್ರಮಿಸಿಕೊಂಡ ಕೀವ್ ಪ್ರದೇಶದಲ್ಲಿ ಒಟ್ಟು 410 ನಾಗರಿಕರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಕ್ರೇನ್ನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಹೇಳಿದ್ದಾರೆ.
ರಷ್ಯಾ ಸೇನೆಯಿಂದ ಇತ್ತೀಚೆಗೆ ವಶಪಡಿಸಿಕೊಂಡ ಕೀವ್ ಪ್ರದೇಶದಲ್ಲಿ ಉಕ್ರೇನ್ ನ 410 ನಾಗರಿಕ ದೇಹಗಳು ದೊರೆತಿವೆ ಎಂದು ಅಲ್ಲಿನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಭಾನುವಾರ ಹೇಳಿದ್ದಾರೆ.ಉಕ್ರೇನ್ ರಾಜಧಾನಿಯಾದ ಕೀವ್ ನಿಂದ ವಾಯುವ್ಯಕ್ಕೆ 30 ಕಿಲೋಮೀಟರ್ (19 ಮೈಲುಗಳು) ದೂರದ ಬುಚಾ ಪಟ್ಟಣದಲ್ಲಿ ನೂರಾರು ಸಂಖ್ಯೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಇದು ರಷ್ಯಾ “ಉದ್ದೇಶಪೂರ್ವಕವಾಗಿ ಮಾಡಿರುವ ಹತ್ಯಾಕಾಂಡ” ಎಂದು ಉಕ್ರೇನ್ ಆರೋಪಿಸಿದೆ.
ಕೀವ್ ಬಳಿಯ ಬುಚಾ ಪಟ್ಟಣದಲ್ಲಿ ನಾಗರಿಕರ ಹತ್ಯೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಭಾನುವಾರ ಒತ್ತಾಯಿಸಿದ್ದಾರೆ. ‘ಉಕ್ರೇನ್ನ ಬುಚಾದಲ್ಲಿ ಕೊಲ್ಲಲ್ಪಟ್ಟ ನಾಗರಿಕರ ಚಿತ್ರಗಳಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಈ ಬಗ್ಗೆ ಸ್ವತಂತ್ರ ತನಿಖೆ ಅತ್ಯಗತ್ಯ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…