Advertisement
MIRROR FOCUS

ವಿದ್ಯುತ್ ಅಭಾವದಿಂದ ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ | ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ

Share

ಯಾವಾಗಲೂ, ಹೆಚ್ಚಿನ ಸಂದರ್ಭದಲ್ಲಿ ವಿದ್ಯುತ್‌ಗೆ ರೈತ #Farmer ಹಾಗೂ ಗ್ರಾಮೀಣ #Rural ಭಾಗ ಕೊನೆಯ ಅವಕಾಶ. ಅದರಲ್ಲೂ ವಿದ್ಯುತ್‌ ಅಭಾವ ಆದಾಗ ಗ್ರಾಮೀಣ ಭಾಗಕ್ಕೆ ಪವರ್‌ ಕಟ್‌ ನಲ್ಲೂ ಮೊದಲ ಆದ್ಯತೆ. ರಾಜ್ಯದಲ್ಲಿ ವಿದ್ಯುತ್ ಅಭಾವ ತೀವ್ರಗೊಂಡಿದ್ದು, ಹೀಗಾಗಿ ಸದ್ದಿಲ್ಲದೇ ಅನಧಿಕೃತ ಲೋಡ್‌ಶೆಡ್ಡಿಂಗ್  ಜಾರಿ ಮಾಡಿದೆ. ವಿದ್ಯುತ್ ಅಭಾವದ ನಡುವೆಯೂ ಎಲ್ಲಾ ಎಸ್ಕಾಂಗಳು ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿದ್ದು ಕೃಷಿಕರನ್ನು ಸಂಪೂರ್ಣ ಕಡೆಗಣಿಸಿದೆ. ಗ್ರಾಮೀಣ ಭಾಗ ಮಾತ್ರವಲ್ಲದೇ ನಗರ ಪ್ರದೇಶಗಳಲ್ಲಿಯೂ ಲೋಡ್‌ಶೆಡ್ಡಿಂಗ್ ಆರಂಭವಾಗಿದೆ.

ಲೋಡ್‌ಶೆಡ್ಡಿಂಗ್ ವಿರುದ್ಧ ರಾಜ್ಯದ ರೈತರು ಸಿಡಿಯುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾಸನ, ಚಾಮರಾಜನಗರ, ಬೆಳಗಾವಿಯ ಚಿಕ್ಕೋಡಿ ಸೇರಿ ಹಲವೆಡೆ ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ನಮಗೆ ಉಚಿತ ವಿದ್ಯುತ್‌ ಬೇಡ. ಬೆಳೆ ಉಳಿಸಿಕೊಳ್ಳಲು ವಿದ್ಯುತ್‌ ನೀಡಿ ಎಂದು ಆಗ್ರಹಿಸಿದ್ದಾರೆ. ಇದಕ್ಕೆ ವಿಪಕ್ಷ ಬಿಜೆಪಿಯೂ ಸಾಥ್ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಬಿಜೆಪಿ ನಾಯಕರು ಎತ್ತಿನಗಾಡಿಯಲ್ಲಿ ಸಂಚರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ತೀವ್ರ ವಿದ್ಯುತ್ ಸಮಸ್ಯೆ ಇರುವುದನ್ನು ಇಂಧನ ಇಲಾಖೆಒಪ್ಪಿಕೊಂಡಿದ್ದು, ವಿಪಕ್ಷಗಳ ಟೀಕೆ ಬೆನ್ನಲ್ಲೇ ಅಂಕಿ ಅಂಶ ಬಹಿರಂಗಮಾಡಿದೆ.

ಇಂಧನ ಇಲಾಖೆ ಹೇಳಿದ್ದೇನು?: ಮುಂಗಾರು ಕೊರತೆಯಿಂದ ತೀವ್ರ ವಿದ್ಯುತ್ ಸಮಸ್ಯೆಯಾಗಿದ್ದು ಪವನ ವಿದ್ಯುತ್, ಸೋಲಾರ್, ಜಲ ವಿದ್ಯುತ್, ಉಷ್ಣಸ್ಥಾವರಗಳಲ್ಲಿ ಉತ್ಪಾದನೆ ಕುಂಠಿತವಾಗಿದೆ. ಪ್ರಸ್ತುತ ನಿತ್ಯ 15 ಸಾವಿರ ಮೆಗಾವ್ಯಾಟ್ ವಿದ್ಯುತ್‌ಗೆ ಬೇಡಿಕೆ ಇದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 9,032 ಮೆಗಾವ್ಯಾಟ್‌ಗೆ ಬೇಡಿಕೆ ಇತ್ತು. ರಾಜ್ಯದಲ್ಲಿ ನಿತ್ಯ 10 ಸಾವಿರ ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದ್ದು ಕೇಂದ್ರ ಮತ್ತು ಹೊರ ರಾಜ್ಯಗಳಿಂದ 3 ಸಾವಿರ ಮೆಗಾವ್ಯಾಟ್ ಪೂರೈಕೆ ಆಗುತ್ತಿದೆ. ನಿತ್ಯ 2 ಸಾವಿರ ಮೆಗಾವ್ಯಾಟ್‌ನಷ್ಟು ವಿದ್ಯುತ್ ಕೊರತೆಯಿದೆ. ಅಲ್ಪಾವದಿಯ ಟೆಂಡರ್ ಮೂಲಕ ವಿದ್ಯುತ್ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಪ್ರತಿ ಜಿಲ್ಲೆಗೂ ನೋಡಲ್ ಅಧಿಕಾರಿ ಮೂಲಕ ವಿದ್ಯುತ್ ಹಂಚಿಕೆಗೆ ಚಿಂತನೆ ನಡೆದಿದೆ.

(ಅಂತರ್ಜಾಲ ಮಾಹಿತಿ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

3 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

7 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

19 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

20 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

20 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

21 hours ago