Advertisement
ಸುದ್ದಿಗಳು

ನಿರುದ್ಯೋಗ….. ಯುವ ಜನಾಂಗಕ್ಕೆ ಶಾಕ್…! | ದೇಶದಲ್ಲಿ ಇನ್ನೂ ಮೂರು ಪಟ್ಟು ಹೆಚ್ಚಾಗಲಿದೆ ನಿರುದ್ಯೋಗ | ರಾಜ್ಯಕ್ಕೆ ಕೊಂಚ ನಿರಾಳ | ಗ್ರಾಮೀಣ ಭಾಗದಲ್ಲಿ ಇಳಿಕೆಯಾದ ನಿರುದ್ಯೋಗ |

Share

ಜಾಗತಿಕವಾಗಿ ಭಾರತ ಎಷ್ಟೇ ಮುಂದುವರೆದರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮಾತ್ರ  ಬೆಳೆಯುತ್ತಿದೆ. ವಿದ್ಯಾಭ್ಯಾಸ ಮುಗಿಸಿ ಇದೀಗ ಉದ್ಯೋಗ ಹುಡುಕಲು ಪ್ರಾರಂಭಿಸಿರುವವರನ್ನು ಬಿಡಿ, ಈಗಾಗಲೇ ಉದ್ಯೋಗದಲ್ಲಿ ನೆಲ ಕಂಡುಕೊಂಡವರೂ, ಸಹ ಇತ್ತೀಚಿನ ದಿನಗಳಲ್ಲಿ ಉದ್ಯೋಗದಲ್ಲಿ ಉಳಿದುಕೊಳ್ಳಲು ಕಸರತ್ತು ನಡೆಸುವ ಪರಿಸ್ಥಿತಿ ಎದುರಾಗಿದೆ.  ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಹಿಂದಿಗಿಂತಲೂ ಭೀಕರವಾಗಿ ಕಾಡುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನ ಹೊರತಾಗಿಯೂ ನಿರುದ್ಯೋಗ ಸಮಸ್ಯೆ ಹತೋಟಿಗೆ ಬರುತ್ತಿಲ್ಲ.ಆದರೆ ವಿಶೇಷ ಎಂದರೆ ಗ್ರಾಮೀಣ ಭಾಗದಲ್ಲಿ  ನಿರುದ್ಯೋಗ ಸಮಸ್ಯೆ ಕೊಂಚ ಇಳಿಮುಖವಾಗಿದೆ.

ಈಚೆಗಷ್ಟೇ ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ ಸಂಸ್ಥೆಯು ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯ ಕುರಿತು ವಿಸ್ತಾರವಾದ ವರದಿ ಬಿಡುಗಡೆ ಮಾಡಿದೆ. ವರದಿಯ ಅಂಕಿ- ಅಂಶಗಳು ಕಳವಳ ಮೂಡಿಸುತ್ತದೆ. ದೇಶದಲ್ಲಿ 2022ರ ಡಿಸೆಂಬರ್‌ ತಿಂಗಳಲ್ಲಿ ನಿರುದ್ಯೋಗ ಪ್ರಮಾಣವು ಶೇಕಡ 8.30ಕ್ಕೆ ಏರಿಕೆ ಆಗಿದ್ದು ವರದಿ ಆಗಿತ್ತು. ಈ ಪ್ರಮಾಣದ ನಿರುದ್ಯೋಗವು 16 ತಿಂಗಳಲ್ಲಿಯೇ ಗರಿಷ್ಠ ಎನ್ನುವ ಆಘಾತಕಾರಿ ಅಂಶವೂ ವರದಿ ಆಗಿತ್ತು.

ನಗರ ಪ್ರದೇಶದಲ್ಲಿ ಇದರ ಪ್ರಮಾಣವು ಕಳೆದ ನವೆಂಬರ್‌ ತಿಂಗಳಲ್ಲಿ ಶೇಕಡವಾರು 8.96 ರಷ್ಟು ಇದ್ದರೆ, ಡಿಸೆಂಬರ್‌ನಲ್ಲಿ ಶೇಕಡವಾರು 10.09ಕ್ಕೆ ಏರಿಕೆಯಾಗಿತ್ತು. ಆದರೆ, ಗ್ರಾಮೀಣ ಪ್ರದೇಶದ ನಿರುದ್ಯೋಗ ಪ್ರಮಾಣವು ಇದೇ ಅವಧಿಯಲ್ಲಿ ಶೇ 7.55ರಿಂದ ಶೇ 7.44ಕ್ಕೆ ಇಳಿಕೆಯಾಗಿತ್ತು.

ಸಮಾಧಾನಕರ ಸಂಗತಿ ಅಂದರೆ, ಕರ್ನಾಟಕದಲ್ಲಿ ನಿರುದ್ಯೋಗ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಲ್ಲಿದೆ. ಅತ್ಯಂತ ಕಡಿಮೆ ನಿರುದ್ಯೋಗ ಸಮಸ್ಯೆ ಇರುವ ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣವು ಶೇ 2.5ರಷ್ಟಿದೆ.

ಆರ್ಥಿಕ ಪ್ರಗತಿ ಆಗುತ್ತಿದ್ದರೂ, ದೇಶದಲ್ಲಿ ಅದೇ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ನಿರುದ್ಯೋಗಿಗಳ ಗುಂಪಿಗೆ ಲಕ್ಷಾಂತರ ಯುವಜನರು ಪ್ರತಿವರ್ಷ ಸೇರ್ಪಡೆ ಆಗುತ್ತಲೇ ಇದ್ದಾರೆ. ಭಾರತದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಲು ಪ್ರಮುಖವಾಗಿ ಎರಡು ಕಾರಣಗಳನ್ನು ಗುರುತಿಸಲಾಗುತ್ತಿದೆ. ಇದರಲ್ಲಿ 2016ರಲ್ಲಿ ಸೃಷ್ಟಿಯಾದ ನೋಟು ರದ್ದತಿ  ಹಾಗೂ 2020ರ ಬಳಿಕ ಕೋವಿಡ್‌ ಸಾಂಕ್ರಾಮಿಕ ಪರಿಸ್ಥಿತಿಯೂ ಸೇರಿದೆ.

ನೋಟು ರದ್ದತಿ ಹಾಗೂ ಜಿಎಸ್‌ಟಿಯ ಪರಿಚಯಿಸಿದ ನಂತರದಲ್ಲಿ ಸಣ್ಣ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಚೇತರಿಕೆ ಕಂಡಿಲ್ಲ. ಇದೆಲ್ಲದರ ನಡುವೆ ಚಿಲ್ಲರೆ ಹಣದುಬ್ಬರವೂ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ನಂತರದಲ್ಲಿ ಪರಿಸ್ಥಿತಿ ಸುಧಾರಿಸಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಕೋವಿಡ್‌ ನಂತರದಲ್ಲಿ ಆರ್ಥಿಕ ವ್ಯವಸ್ಥೆ ಸುಧಾರಿಸಿದರೂ, ಉದ್ಯೋಗ ಸೃಷ್ಟಿ ಆಗುತ್ತಿಲ್ಲ ಎನ್ನುವುದು  ವರದಿಯ ಅಂಶ.

ಮುಂದಿನ ದಿನಗಳಲ್ಲಿ ನಿರುದ್ಯೋಗ ಪ್ರಮಾಣವು 4 ಪ್ರತಿಶತದಿಂದ 8 ಪ್ರತಿಶತಕ್ಕೆ ನಾಲ್ಕು ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ ಎಚ್ಚರಿಕೆ ನೀಡಿದೆ. ಅಂದಾಜಿನ ಪ್ರಕಾರ, ಮುಂದಿನ ನಾಲ್ಕು ವರ್ಷಗಳಲ್ಲಿ, 10 ಮಿಲಿಯನ್ಗೂ ಹೆಚ್ಚು ಜನ  ನಿರುದ್ಯೋಗಿಗಳಾಗಲಿದ್ದಾರೆ.

ಇದು ಭಾರತದ ನಗರ ಪ್ರದೇಶದಲ್ಲಿ 10.09%  ಇದ್ದು, ಗ್ರಾಮೀಣ ಭಾರತದಲ್ಲಿ 7.44% ಇದೆ ಎಂದು ವರದಿ ಮಾಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ದೈತ್ಯ ಸಾಫ್ಟವೇರ್‌ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುತ್ತಿದೆ. ಭಾರತದಲ್ಲಿ ನಿರುದ್ಯೋಗ ಸಮಸ್ಯೆ ತಪ್ಪಿಸಲು ಈ ಹಿಂದೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಚರ್ಚೆ ನಡೆಯುವುದರ ಜೊತೆಗೆ ಇದಕ್ಕೆ ಶೀಘ್ರ ಪರಿಹಾರವನ್ನೂ ಕಂಡುಕೊಳ್ಳಬೇಕಿದೆ.

ವಿಶ್ವದಲ್ಲಿ ನಿರುದ್ಯೋಗ ದರ ಬೇರೆ ಬೇರೆಯಾಗಿರುತ್ತದೆ. ಒಬ್ಬ ವ್ಯಕ್ತಿಯು ಉದ್ಯೋಗದಲ್ಲಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಬಳಸುವ ಮಾನದಂಡಗಳು ರಾಷ್ಟ್ರದಿಂದ ರಾಷ್ಟ್ರಕ್ಕೆ ಭಿನ್ನವಾಗಿರುತ್ತವೆ. ಒಬ್ಬ ವ್ಯಕ್ತಿಯು ವಾರಕ್ಕೆ 15 ಗಂಟೆಗಳಿಗಿಂತ ಕಡಿಮೆ ಕೆಲಸ ಮಾಡುತ್ತಿದ್ದರೆ ಅವರನ್ನು ಸಾಮಾನ್ಯವಾಗಿ ಅನೇಕ  ರಾಷ್ಟ್ರಗಳಲ್ಲಿ “ನಿರುದ್ಯೋಗಿ” ಎಂದು ಪರಿಗಣಿಸಲಾಗುತ್ತದೆ. 64 ರಾಷ್ಟ್ರಗಳ  ಹೋಲಿಕೆಯಲ್ಲಿ  ಯುಕೆಯಲ್ಲಿ ನಿರುದ್ಯೋಗ ದರವು 28 ನೇ ಸ್ಥಾನದಲ್ಲಿದೆ. ಕತಾರ್, ಕಾಂಬೋಡಿಯಾ ಮತ್ತು ಕೋಕೋಸ್ ದ್ವೀಪಗಳಲ್ಲಿ ನಿರುದ್ಯೋಗ ದರಗಳು ಆಶ್ಚರ್ಯಕರವಾಗಿ ಕಡಿಮೆಯಾಗಿದೆ 1% ಕ್ಕಿಂತ ಕಡಿಮೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago