ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ, ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ.
180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ ಲೋಕ, ಕರ್ನಾಟಕದ ಸಂಸ್ಕೃತಿ ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಇಲ್ಲಿನ ಕಲೆ ಮತ್ತು ಪರಂಪರೆಯ ಸಂರಕ್ಷಣೆಯನ್ನು ಪರಿಗಣಿಸಿ, ವಿಶ್ವ ಮಾನ್ಯತೆ ಪಡೆದ ಯುನೆಸ್ಕೋದ ಪಾರಂಪರಿಕ ಪಟ್ಟಿಗೆ, ಜಾನಪದ ಲೋಕವನ್ನು ಸೇರ್ಪಡೆ ಮಾಡಲಾಗಿದೆ. ಅನೇಕ ಪ್ರಕಾರದ ಜಾನಪದ ಗೀತೆ, ಸಾಹಿತ್ಯ, ನಾನಾ ಪ್ರಕಾರದ ವಿಡಿಯೋ ಚಿತ್ರೀಕರಣವನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಇಲ್ಲಿನ ಬಯಲು ರಂಗಮಂದಿರ, ತನ್ನದೇ ಆದ ವಿಶೇಷವನ್ನು ಹೊಂದಿದೆ. ಇಲ್ಲಿನ ಲೋಕಮಹಲ್ ವಸ್ತು ಸಂಗ್ರಹಾಲಯದಲ್ಲಿರುವ ಜಾನಪದ ಕಲಾವಿದರ ವೇಷಭೂಷಣಗಳು, ನೋಡುಗರ ಕಣ್ಮನ ಸೆಳೆಯುತ್ತವೆ.
ಇಲ್ಲಿರುವ ವಿವಿಧ ಕಲಾವಸ್ತುಗಳ ಪ್ರದರ್ಶನ, ಅನೇಕ ಪಳಯುಳಿಕೆಗಳನ್ನು ಪರಿಗಣಿಸಿ, ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಹೇಳುತ್ತಾರೆ.
ಜಾನಪದ ಲೋಕ ವಸ್ತು ಸಂಗ್ರಹಲಾಯದ ಮುಖ್ಯಸ್ಥ ಡಾ.ರವಿ ಯು.ಎಂ, ಜಾನಪದ ಲೋಕ, ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳವಾಗಿದೆ. ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದದ್ದು, ಸಂತಸದ ಸಂಗತಿ ಎಂದು ಸಂತಸ ಹಂಚಿಕೊಳ್ಳುತ್ತಾರೆ.
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು…
ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …
ಎಪ್ರಿಲ್ 1 ರಿಂದ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…