ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ, ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ.
180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ ಲೋಕ, ಕರ್ನಾಟಕದ ಸಂಸ್ಕೃತಿ ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಇಲ್ಲಿನ ಕಲೆ ಮತ್ತು ಪರಂಪರೆಯ ಸಂರಕ್ಷಣೆಯನ್ನು ಪರಿಗಣಿಸಿ, ವಿಶ್ವ ಮಾನ್ಯತೆ ಪಡೆದ ಯುನೆಸ್ಕೋದ ಪಾರಂಪರಿಕ ಪಟ್ಟಿಗೆ, ಜಾನಪದ ಲೋಕವನ್ನು ಸೇರ್ಪಡೆ ಮಾಡಲಾಗಿದೆ. ಅನೇಕ ಪ್ರಕಾರದ ಜಾನಪದ ಗೀತೆ, ಸಾಹಿತ್ಯ, ನಾನಾ ಪ್ರಕಾರದ ವಿಡಿಯೋ ಚಿತ್ರೀಕರಣವನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಇಲ್ಲಿನ ಬಯಲು ರಂಗಮಂದಿರ, ತನ್ನದೇ ಆದ ವಿಶೇಷವನ್ನು ಹೊಂದಿದೆ. ಇಲ್ಲಿನ ಲೋಕಮಹಲ್ ವಸ್ತು ಸಂಗ್ರಹಾಲಯದಲ್ಲಿರುವ ಜಾನಪದ ಕಲಾವಿದರ ವೇಷಭೂಷಣಗಳು, ನೋಡುಗರ ಕಣ್ಮನ ಸೆಳೆಯುತ್ತವೆ.
ಇಲ್ಲಿರುವ ವಿವಿಧ ಕಲಾವಸ್ತುಗಳ ಪ್ರದರ್ಶನ, ಅನೇಕ ಪಳಯುಳಿಕೆಗಳನ್ನು ಪರಿಗಣಿಸಿ, ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಹೇಳುತ್ತಾರೆ.
ಜಾನಪದ ಲೋಕ ವಸ್ತು ಸಂಗ್ರಹಲಾಯದ ಮುಖ್ಯಸ್ಥ ಡಾ.ರವಿ ಯು.ಎಂ, ಜಾನಪದ ಲೋಕ, ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳವಾಗಿದೆ. ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದದ್ದು, ಸಂತಸದ ಸಂಗತಿ ಎಂದು ಸಂತಸ ಹಂಚಿಕೊಳ್ಳುತ್ತಾರೆ.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…