Advertisement
MIRROR FOCUS

ಮುಗಿಯದ ಕಾವೇರಿ ವಿವಾದ | ಮತ್ತೆ ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ CWRC ಸೂಚನೆ |

Share

ಕಾವೇರಿ ನೀರು(Cauvery water) ಹಂಚಿಕೆ ವಿಚಾರದಲ್ಲಿ ಕರ್ನಾಟಕ(Karnataka) ಹಾಗೂ ತಮಿಳುನಾಡಿಗೆ(Tamilnadu) ಇದು ಮುಗಿಯದ ವಿವಾದ ಎನ್ನಿಸುತ್ತಿದೆ. ರಾಜ್ಯದಲ್ಲಿ ಮಳೆ(Rain) ಕೊರತೆಯಿಂದ ರೈತರು(Farmer) ತಮ್ಮ ಕೃಷಿಗಳಿಗೆ(Agriculture) ನೀರಿಲ್ಲದೆ ಬಳಲುತ್ತಿದ್ದರೆ ಅತ್ತ ತಮಿಳುನಾಡು ತನ್ನ ಹಿತಾಸಕ್ತಿಗಾಗಿ ಯಾವ ಹಂತಕ್ಕೂ ಇಳಿಯಲು ಹೇಸುತ್ತಿಲ್ಲ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ನವೆಂಬರ್ 23ರಿಂದ ಡಿಸೆಂಬರ್ 23ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ.

ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್‌ನ(supreme court) ಅಂತಿಮ ತೀರ್ಪು ಪಾಲಿಸುವಂತೆ ಸಮಿತಿ ಕರ್ನಾಟಕ ಸರ್ಕಾರಕ್ಕೆ(Karnataka government) ಆದೇಶಿಸಿದೆ. ನವದೆಹಲಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ಸಮಿತಿಯ ಸಭೆಯಲ್ಲಿ 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ವಾದ ಮುಂದಿಟ್ಟಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕ, ನಮ್ಮಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿಯಿಂದಾಗಿ ಅಷ್ಟೊಂದು ನೀರು ಹರಿಸಲು ಸಾಧ್ಯವೇ ಇಲ್ಲ. ಮುಂದೆ ಮಳೆಯೂ ಬರುವ ಸಾಧ್ಯತೆ ಇಲ್ಲದ ಹಿನ್ನೆಲೆ 17 ಟಿಎಂಸಿ ನೀರು ಕೇಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದೆ.

ನವೆಂಬರ್‌ 3ರಂದು ನಡೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 2,600 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. ಇದೀಗ ಮತ್ತೆ ಒಂದು ತಿಂಗಳು ನೀರು ಹರಿಸಲು ಸೂಚಿಸಿದೆ.

– ಅಂತರ್ಜಾಲ ಮಾಹಿತಿ

Karnataka has once again suffered a setback in the matter of Cauvery river water. The Cauvery River Water Control Committee (CWRC) has instructed Tamil Nadu to release 2,700 cusecs of water daily from November 23 to December 23. The committee has ordered the Karnataka government to abide by the Cauvery adjudication and the final judgment of the Supreme Court.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

5 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

11 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

11 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago