Advertisement
MIRROR FOCUS

ಮುಗಿಯದ ಕಾವೇರಿ ವಿವಾದ | ಮತ್ತೆ ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ CWRC ಸೂಚನೆ |

Share

ಕಾವೇರಿ ನೀರು(Cauvery water) ಹಂಚಿಕೆ ವಿಚಾರದಲ್ಲಿ ಕರ್ನಾಟಕ(Karnataka) ಹಾಗೂ ತಮಿಳುನಾಡಿಗೆ(Tamilnadu) ಇದು ಮುಗಿಯದ ವಿವಾದ ಎನ್ನಿಸುತ್ತಿದೆ. ರಾಜ್ಯದಲ್ಲಿ ಮಳೆ(Rain) ಕೊರತೆಯಿಂದ ರೈತರು(Farmer) ತಮ್ಮ ಕೃಷಿಗಳಿಗೆ(Agriculture) ನೀರಿಲ್ಲದೆ ಬಳಲುತ್ತಿದ್ದರೆ ಅತ್ತ ತಮಿಳುನಾಡು ತನ್ನ ಹಿತಾಸಕ್ತಿಗಾಗಿ ಯಾವ ಹಂತಕ್ಕೂ ಇಳಿಯಲು ಹೇಸುತ್ತಿಲ್ಲ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ನವೆಂಬರ್ 23ರಿಂದ ಡಿಸೆಂಬರ್ 23ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ.

ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್‌ನ(supreme court) ಅಂತಿಮ ತೀರ್ಪು ಪಾಲಿಸುವಂತೆ ಸಮಿತಿ ಕರ್ನಾಟಕ ಸರ್ಕಾರಕ್ಕೆ(Karnataka government) ಆದೇಶಿಸಿದೆ. ನವದೆಹಲಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ಸಮಿತಿಯ ಸಭೆಯಲ್ಲಿ 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ವಾದ ಮುಂದಿಟ್ಟಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕ, ನಮ್ಮಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿಯಿಂದಾಗಿ ಅಷ್ಟೊಂದು ನೀರು ಹರಿಸಲು ಸಾಧ್ಯವೇ ಇಲ್ಲ. ಮುಂದೆ ಮಳೆಯೂ ಬರುವ ಸಾಧ್ಯತೆ ಇಲ್ಲದ ಹಿನ್ನೆಲೆ 17 ಟಿಎಂಸಿ ನೀರು ಕೇಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದೆ.

ನವೆಂಬರ್‌ 3ರಂದು ನಡೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 2,600 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. ಇದೀಗ ಮತ್ತೆ ಒಂದು ತಿಂಗಳು ನೀರು ಹರಿಸಲು ಸೂಚಿಸಿದೆ.

– ಅಂತರ್ಜಾಲ ಮಾಹಿತಿ

Karnataka has once again suffered a setback in the matter of Cauvery river water. The Cauvery River Water Control Committee (CWRC) has instructed Tamil Nadu to release 2,700 cusecs of water daily from November 23 to December 23. The committee has ordered the Karnataka government to abide by the Cauvery adjudication and the final judgment of the Supreme Court.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

11 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

11 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

11 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

12 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

23 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago