ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |

February 1, 2025
2:28 PM
ಕೇಂದ್ರ ಬಜೆಟ್‌ ಮಂಡನೆ

ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಕೃಷಿ , ಗ್ರಾಮೀಣ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರವನ್ನು ಆದ್ಯತೆ ಕ್ಷೇತ್ರವಾಗಿ ಪರಿಗಣಿಸಿದೆ. ಕೃಷಿ ಬಜೆಟ್‌ ಮೊದಲು ಮಂಡಿಸುವ ಮೂಲಕ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿಯನ್ನು ಆದ್ಯತೆಯಾಗಿ ಪರಿಗಣಿಸಿದ್ದಾರೆ. ಕೃಷಿಯ ಮೂಲಕ ಬಜೆಟ್‌ ಆರಂಭಿಸಿದರು.…..ಮುಂದೆ ಓದಿ….

Advertisement

ಯುವಕರು, ರೈತರು, ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ ಎಂದರು. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಇನ್ನೂ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್​ಎಎಫ್​ಇಇ, ಎನ್​ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ ಎಂದರು. 100 ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.

ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ವಿಕಸಿತ ಭಾರತವು ಬಡತನದಿಂದ ಮುಕ್ತ ಆಗಲಿದೆ. ಮೌಲ್ಯಯುತ ಶಿಕ್ಷಣ, ಕೈಗೆಟುಕ ದರದಲ್ಲಿ ಆರೋಗ್ಯ ಸೇವೆ ಒದಗಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ
April 13, 2025
6:38 AM
by: ದ ರೂರಲ್ ಮಿರರ್.ಕಾಂ
ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |
April 12, 2025
9:16 PM
by: The Rural Mirror ಸುದ್ದಿಜಾಲ
ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ
April 12, 2025
8:44 PM
by: The Rural Mirror ಸುದ್ದಿಜಾಲ
ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ
April 12, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group