ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2026-27ರಲ್ಲಿ ಕೃಷಿ, ಕರಾವಳಿ ಮೀನುಗಾರಿಕೆ, ಆರೋಗ್ಯ ಕ್ಷೇತ್ರ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ. “ವಿಕಸಿತ ಭಾರತ” ಗುರಿಯೊಂದಿಗೆ ಗ್ರೇಡ್-2(ಟೈರ್ -2) ಮತ್ತು ಗ್ರೇಡ್-3(ಟೈರ್-3) ನಗರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ಘೋಷಿಸಿದೆ.
ಸಾರ್ವಜನಿಕ ಬಂಡವಾಳ ವೆಚ್ಚವನ್ನು ₹11.2 ಲಕ್ಷ ಕೋಟಿಯಿಂದ ₹12.2 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಮೂಲಸೌಕರ್ಯ ವಿಸ್ತರಣೆ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ವೇಗ ಸಿಗಲಿದೆ.
ಕರಾವಳಿ ಆರ್ಥಿಕತೆಯ ಪ್ರಮುಖ ವಲಯವಾಗಿರುವ ಮೀನುಗಾರಿಕೆ ಹಾಗೂ ಸೀಫುಡ್ ರಫ್ತುಗೆ ಬೆಂಬಲ ನೀಡಲಾಗಿದ್ದು, ಡ್ಯೂಟಿ-ಫ್ರೀ ಇನ್ಪುಟ್ ಮಿತಿಯನ್ನು 1%ರಿಂದ 3%ಗೆ ಹೆಚ್ಚಿಸಲಾಗಿದೆ.
ಅದೇ ವೇಳೆ ಕೃಷಿಯಲ್ಲಿ ತೆಂಗು–ಕೋಕೋ ಸೇರಿದಂತೆ ವಾಣಿಜ್ಯ ಬೆಳೆಗಳಿಗೆ ಉತ್ತೇಜನ ನೀಡುವ ಜೊತೆಗೆ MSME ಹಾಗೂ ಸಣ್ಣ ಕೈಗಾರಿಕೆಗಳಿಗೆ ‘Corporate Mitras’ ತರಬೇತಿ ಯೋಜನೆ ಜಾರಿಗೆ ತರಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಿರುವ 17 ಔಷಧಗಳ ಮೇಲೆ ಕಸ್ಟಮ್ಸ್ ಡ್ಯೂಟಿ ವಿನಾಯಿತಿ ನೀಡಲಾಗಿದೆ.
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…