ಕಡಲೆ, ತೊಗರಿ, ಉದ್ದಿನ ಬೇಳೆಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೂಚನೆ | ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವಂತೆ ಉನ್ನತಮಟ್ಟದ ಅಧಿಕಾರಿಗಳ ಜೊತೆ ಸಭೆ

July 18, 2024
1:01 PM

ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ(Rate) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಭಾರಿ ಮಳೆಯ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಿಂದ ಹಣದುಬ್ಬರ ಉಂಟಾಗಿದೆ. ತರಕಾರಿ ಮಾತ್ರವಲ್ಲದೆ ಬೇಳೆ-ಕಾಳುಗಳ ದರವೂ ಏರಿದೆ. ಇದೀಗ ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ  ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ನೀಡಿದ್ದಾರೆ.

ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ (Chana Dal), ಉದ್ದು (Urad Dal) ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ – ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದೂ ಸಚಿವರು ಹೇಳಿದರು.

ಸಣ್ಣ-ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ, ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಬೇಳೆಗಳ ಬೆಲೆಯನ್ನು ಕೂಡಲೇ ಇಳಿಸುವಂತೆ ಈ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror